ಒಡಿಶಾ: ಪ್ರೀತಿಸಿದಾಕೆಯನ್ನು ವಿವಾಹವಾಗಲು ಇಷ್ಟವಿಲ್ಲದ್ದಕ್ಕೆ ಆಕೆಯನ್ನು ಪ್ರೇಮಿಯೊಬ್ಬ 49 ಬಾರಿ ಇರಿದು ಹತ್ಯೆ ಮಾಡಿದ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ.
ಜಗನ್ನಾಥ ಗೋಡಾ ಹತ್ಯೆ ಆರೋಪಿ. ಕುಣಿದಾರ್ ಸೀಮಾದಾಸ್ ಕೊಲೆಯಾದಾಕೆ. ಜಗನ್ನಾಥ ಮತ್ತು ಸೀಮಾದಾಸ್ ಪ್ರೀತಿಸುತ್ತಿದ್ದರು. ಆದರೆ ಆಕೆಯನ್ನು ವಿವಾಹವಾಗಲು ಆತನಿಗೆ ಇಚ್ಚೆ ಇರಲಿಲ್ಲ..ಈ ಕಾರಣಕ್ಕಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಗೈಯಲು ಈತ ಮೊದಲೇ ಯೋಜನೆ ರೂಪಿಸಿ ಗುಜರಾತ್ ಗೆ ಯುವತಿಯನ್ನು ಕರೆದೊಯ್ದಿದ್ದ. ಬಳಿಕ ಸ್ಥಳವೊಂದರಲ್ಲಿ ಆಕೆಗೆ 49 ಬಾರಿ ಮನಬಂದಂತೆ ಇರಿದಿದ್ದು, ಬಳಿಕ ನಿರ್ಜನ ಪ್ರದೇಶದ ಗದ್ದೆಯಲ್ಲಿ ಮೃತದೇಹವನ್ನು ಇರಿದು ಹೋಗಿದ್ದಾನೆ.
ಯುವತಿ ಕೊಲೆಯಾಗಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಮೃತದೇಹದಲ್ಲಿದ್ದ ಟಿ ಶರ್ಟ್ ಆಧರಿಸಿ ಆರೋಪಿಯನ್ನು ಹುಡುಕಾಡಿ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…