ಶಿವಮೊಗ್ಗ: ಉಪನ್ಯಾಸಕರಾಗಿರುವ ರೂಪಾ ಹಾಗೂ ಮುರಳಿ ಕಳೆದ ನಾಲೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಪ್ರೀತಿಸಿದ ಯುವಕ ಬೇರೊಬ್ಬಳನ್ನು ಮದುವೆಯಾಗಿದ್ದು ಈ ವಿಷಯ ರೂಪಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಪ್ರೀತಿಸಿದ ಯುವಕ ಬೇರೆಯವರನ್ನು ಮದುವೆಯಾಗಿರುವುದಕ್ಕೆ ಮನನೊಂದ ಯುವತಿ ಪ್ರಿಯಕರನ ಮದುವೆ ದಿನದಂದೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶಿವಮೊಗ್ಗದವರೇ ಆಗಿದ್ದ ರೂಪಾ ಹಾಗೂ ಮುರಳಿ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಜಾತಿಯಲ್ಲಿ ಇಬ್ಬರು ಬೇರೆಯಾದರೂ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರು.
ಹಿಂದೆಯೇ ರೂಪಾಳಿಗೆ ಮದುವೆ ಮಾಡಲು ಪೋಷಕರು ಗಂಡು ಹುಡುಕಲು ಪ್ರಾರಂಭಿಸಿದ್ದರು. ಆದರೆ ರೂಪ ಯಾವುದನ್ನೂ ಒಪ್ಪಿಕೊಂಡಿರಲಿಲ್ಲ. ಪಿಎಚ್ಡಿ ಮುಗಿದ ಬಳಿಕ ಪ್ರೀತಿಯ ವಿಷಯವನ್ನು ಮನೆಯವರಿಗೆ ತಿಳಿಸಿ, ಮದುವೆಯಾಗೋಣವೆಂದು ಮುಂದೂಡುತ್ತಾ ಬಂದಿದ್ದರು.
ಆದರೆ ತನ್ನ ಪ್ರೇಮಿ ಬೇರೆಯೊಬ್ಬಳನ್ನು ಮದುವೆಯಾಗಿದ್ದಾಳೆ ಎಂಬ ವಿಷಯ ತಿಳಿದ ರೂಪಾ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ.
ಇನ್ನು ರೂಪ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪಲ್ಲವಿಗೆ ತಾಳಿ ಕಟ್ಟುತ್ತಿದ್ದಂತೆ ಮುರಳಿ ಕಲ್ಯಾಣ ಮಂಟಪದಿಂದಲೇ ಪರಾರಿಯಾಗಿದ್ದು, ಈ ವಿಚಾರ ತಿಳಿದ ವಧು ಮದುವೆ ಮಂಟಪದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯ ಪೋಷಕರು ಆಕೆಯನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುರಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…