ಹಲವು ವರ್ಷಗಳಿಂದ ಪ್ರೀತಿಸಿ ಇದೀಗ ಮದುವೆಯಾಗಲು ನಿರಾಕರಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಆರೋಪಿಸಿ ಮುಂಬೈ ಮೂಲದ ನಟಿಯೊಬ್ಬರು ಸ್ಯಾಂಡಲ್ ವುಡ್ ನಟನ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಸ್ಯಾಂಡಲ್ವುಡ್ ನಟ ಕಿರಣ್ ರಾಜ್ನನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಮುಂಬೈ ಮೂಲದ ಮಾಡಲ್ ಹಾಗೂ ನಟಿಯೊಬ್ಬರನ್ನು ಸ್ಯಾಂಡಲ್ ವುಡ್ ನಟ ಕಿರಣ್ರಾಜ್ ಪ್ರೀತಿಸುತ್ತಿದ್ದು , ಇವರಿಬ್ಬರೂ ಕಳೆದ ಐದು ವರ್ಷದಿಂದ ರಾಜರಾಜೇಶ್ವರನಗರ ವ್ಯಾಪ್ತಿಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮದುವೆಯಾಗೋಣವೆಂದು ಕಿರಣ್ರಾಜ್ ಜೊತೆ ಮಾತುಕತೆ ನಡೆಸಿದಾಗ ಮದುವೆಗೆ ನಿರಾಕರಿಸಿ ಜಗಳವಾಡಿದ್ದು , ಮಾರ್ಚ್ 24ರಂದು ಇದೇ ವಿಚಾರವಾಗಿ ಗಲಾಟೆಯಾದಾಗ ನನ್ನ ಮೇಲೆ ಕಿರಣ್ ಹಲ್ಲೆ ನಡೆಸಿರುವುದಲ್ಲದೆ ತನಗೆ ವಂಚಿಸಿದ್ದಾರೆಂದು ರಾಜರಾಜೇಶ್ವರಿನಗರ ಠಾಣೆಗೆ ನಟಿ ದೂರು ನೀಡಿದ್ದಾರೆ. ವಂಚನೆ, ಹಲ್ಲೆ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಟ ಕಿರಣ್ರಾಜ್ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…