Featured

ಪ್ರೀತಿಸಿ ಮದುವೆ ಆಗಿದ್ದ ಹೆಂಡತಿ ಸ್ನೇಹಿತನ ಜೊತೆ ಪರಾರಿ : ಮನನೊಂದ ಪತಿ ನೇಣಿಗೆ ಶರಣು – vishwanews24

ಪ್ರೀತಿಸಿ ಮದುವೆ ಆಗಿದ್ದ ಹೆಂಡತಿ ಸ್ನೇಹಿತನ ಜೊತೆ ಪರಾರಿ : ವಿಡಿಯೋ ಮಾಡಿ ನೇಣಿಗೆ ಶರಣಾದ ಪತಿ

ಗುಬ್ಬಿ: ಪ್ರೀತಿಸಿ ಮದುವೆ ಆಗಿದ್ದ ದಂಪತಿಗಳ ಮಧ್ಯೆ ಬಂದ ಸ್ನೇಹಿತ ಪತ್ನಿಯನ್ನು ಮೋಹಿಸಿ ಕರೆದೊಯ್ದ ವಿಚಾರಕ್ಕೆ ಮನ ನೊಂದ ಪತಿ ಸೆಲ್ಸಿ ವಿಡಿಯೋ ಮೂಲಕ ನನ್ನ ಸಾವಿಗೆ ಓಡಿ ಹೋದ ಪತ್ನಿ ಹಾಗೂ ಸ್ನೇಹಿತ ಕಾರಣ ಎಂದು ಹೇಳಿ ನ್ಯಾಯ ಕೊಡಿಸಿ ಎಂದು ಸ್ನೇಹಿತರಲ್ಲಿ ಮನವಿ ಮಾಡಿದ ವಿಡಿಯೋ ಫೇಸ್ ಬುಕ್‌ಗೆ ಅಪ್ಲೋಡ್ ಮಾಡಿ ನೇಣಿಗೆ ಶರಣಾದ ಧಾರುಣ ಘಟನೆ ಪಟ್ಟಣದ ಗಟ್ಟಿ ಲೇಔಟ್ ಬಡಾ ವಣೆಯಲ್ಲಿ ನಡೆದಿದೆ.

ನಾಗೇಶ್ (35) ನೇಣಿಗೆ ಶರಣಾದ ಪತಿ. ಕಳೆದ 12 ವರ್ಷದ ಹಿಂದೆ ರಂಜಿತಾ ಎಂಬ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ ನಾಗೇಶ್ ಈಚೆಗೆ ಸ್ವಂತ ಮನೆ ಮಾರಾಟ ಮಾಡಿ ಗಟ್ಟಿ ಲೇಔಟ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈಚೆಗೆ ಈ ದಂಪತಿಗಳ ಮಧ್ಯೆ ಬಿರುಗಾಳಿಯಂತೆ ಬಂದ ಸ್ನೇಹಿತ ಭರತ್ ಎಂಬಾತ ರಂಜಿತಾಳನ್ನು ಮೋಹಕ್ಕೆ ಸಿಲುಕಿಸಿಕೊಂಡು ಓಡಿ ಹೋದ ಘಟನೆ ನಡೆದಿದೆ.

ತೀವ್ರ ಮನನೊಂದ ನಾಗೇಶ್ ಜಿಗುಪ್ಪೆಗೊಂಡು ಎರಡು ಮಕ್ಕಳನ್ನು ಬಿಟ್ಟು ಮಂಗಳವಾರ ಮನೆಯಲ್ಲಿ ಸೆಲ್ಸಿ ವಿಡಿಯೋ ಮಾಡಿ ತನ್ನ ಸಂಸಾರದಲ್ಲಿ ಬಂದ ಸ್ನೇಹಿತ ಭರತ್ ತನ್ನ ಪತ್ನಿ ರಂಜಿತಾ ಜೊತೆ ಅನೈತಿಕ ಸಂಬಂಧ ಹೊಂದಿದ್ದು ಈಚೆಗೆ ಇಬ್ಬರು ಪರಾರಿಯಾದ ಘಟನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣನಾಗುತ್ತಾನೆ. ನನ್ನ ಸಾವಿಗೆ ಪತ್ನಿ ರಂಜಿತಾ ಹಾಗೂ ಸ್ನೇಹಿತ ಭರತ್ ಕಾರಣ ಎಂದು ಹೇಳಿ ವಿಡಿಯೋ ಫೇಸ್ ಬುಕ್‌ಗೆ ಅಪ್ಲೋಡ್ ಮಾಡಿ ನೇಣಿಗೆ ಶರಣಾಗಿದ್ದಾನೆ. ವಿಡಿಯೋ ನೋಡಿದ ಹಲವು ಸ್ನೇಹಿತರು ಮನೆಯತ್ತ ಬರುವ ವೇಳೆಗೆ ನಾಗೇಶ್ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಗುಬ್ಬಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago