ಉಳ್ಳಾಲ: ಒಮನ್ ನಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಸೋಮೇಶ್ವರ ಮೂಲದ ಯುವಕನೋರ್ವ ತನ್ನ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ
ಘಟನೆಯೊಂದು ಬೆಳಕಿಗೆ ಬಂದಿದೆ.
ಉಳ್ಳಾಲದ ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ (32) ಮೃತಪಟ್ಟ ದುರ್ದೈವಿ.
ಪುನೀತ್ ಕಳೆದ ಒಂದೂವರೆ ವರ್ಷಗಳಿಂದ ಒಮಾನ್ನ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ಇತ್ತೀಚಿಗೆ ಒಂದೂವರೆ ತಿಂಗಳ ಹಿಂದಷ್ಟೇ ಊರಿಗೆ ಬಂದು ಮರಳಿದ್ದರು. ಇದೀಗ ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನೂ ಓದಿ 👇:
ಪುನೀತ್ ಮಂಗಳೂರಿನ ಉರ್ವಾ ಮೂಲದ ಯುವತಿಯನ್ನು ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು.ಎನ್ನಲಾಗಿದ್ದು ಇತ್ತೀಚಿನ ದಿನಗಳಲ್ಲಿ ಯುವತಿಯು ಪುನೀತ್ ಅವರ ಕರೆ ಹಾಗೂ ಸಂದೇಶಗಳಿಗೆ ಸ್ಪಂದಿಸದೆ ಪ್ರೀತಿಯನ್ನು ನಿರಾಕರಿಸಿದ್ದರು ಎನ್ನಲಾಗಿದೆ.
ಲೈವ್ ವಿಡಿಯೋ: ಪ್ರೀತಿ ನಿರಾಕರಣೆಯಿಂದ ಮನನೊಂದಿದ್ದ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ, ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತದೇಹ ತರಲು ವಿಳಂಬ ಸಾಧ್ಯತೆ:
ಮಧ್ಯಪ್ರಾಚ್ಯದಲ್ಲಿ ಸದ್ಯ ಇರುವ ಅಶಾಂತ ಪರಿಸ್ಥಿತಿಯಿಂದಾಗಿ ಒಮಾನ್ನ ಕಾನೂನು ಪ್ರಕ್ರಿಯೆಗಳಿಗೆ ಹೆಚ್ಚಿನ ಸಮಯ ತಗುಲುವ ಸಾಧ್ಯತೆಯಿದ್ದು, ಈ ಕಾರಣದಿಂದ ಮೃತದೇಹವನ್ನು ಭಾರತಕ್ಕೆ ತರಲು ವಿಳಂಬವಾಗಬಹುದು ಎಂದು ಕುಟುಂಬಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ 👇:
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…