Featured

ಪ್ರೇಮಿಗಳು ಒಟ್ಟಿಗೆ ಸಾಯಲು ನಿರ್ಧಾರ : ನೇಣಿಗೆ ಕೊರಳೊಡ್ಡಿದ ಪ್ರೇಮಿ ಸಾವು , ಸಾವಿನ ಭಯದಿಂದ ಹಿಂದೆ ಸರಿದು ಪ್ರಾಣ ಉಳಿಸಿಕೊಂಡ ಪ್ರೇಯಸಿ – Vishwanews24

ಪ್ರೇಮಿಗಳು ಒಟ್ಟಿಗೆ ಸಾಯಲು ನಿರ್ಧಾರ : ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವು , ಸಾವಿನ ಭಯದಿಂದ ಹಿಂದೆ ಸರಿದು ಪ್ರಾಣ ಉಳಿಸಿಕೊಂಡ ಪ್ರೇಯಸಿ

ಪತ್ತನಂತಿಟ್ಟ: ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ 31 ವರ್ಷದ ವ್ಯಕ್ತಿ ಹಾಗೂ ಆತನ ಪ್ರೇಯಸಿ ಒಟ್ಟಿಗೆ ಸಾಯಲು ನಿರ್ಧರಿಸಿದ್ದು, ದುರಾದೃಷ್ಟವೆಂಬಂತೆ ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಭಯದಿಂದ ಹಿಂದೆ ಸರಿದ ಪ್ರೇಯಸಿ ಕೊನೆ ಕ್ಷಣದಲ್ಲಿ ತನ್ನ ಪ್ರಾಣ ಉಳಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಇಬ್ಬರು ಪ್ರೇಮಿಗಳು ಒಟ್ಟಿಗೆ ಸಾಯಲು ನಿರ್ಧರಿಸಿ ಹೋಟೆಲೊಂದರಲ್ಲಿ ರೂಮ್‌ ಬುಕ್‌ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಒಂದಷ್ಟು ಔಷಧಿಯನ್ನೂ ಸೇವಿಸಿ ಸಾಯಲು ಮುಂದಾಗಿದ್ದಾರೆ. ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿಗೆ ಹೆದರಿ ಹಿಂದೆ ಸರಿದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಸೋಮವಾರ ರಾತ್ರಿ ಹೋಟೆಲ್‌ ರೂಮ್‌ನಿಂದ ಯುವತಿ ಅಳುವ ಸದ್ದು ಕೇಳಿ ಅಲ್ಲಿನ ಸಿಬ್ಬಂದಿಗಳು ರೂಮ್‌ ಬಾಗಿಲು ತೆಗೆದು ನೋಡಿದಾಗ ವ್ಯಕ್ತಿಯ ಮೃತದೇಹ ನೇತಾಡುತ್ತಿರುವುದು ಕಂಡುಬಂದಿದೆ. ಇನ್ನೂ, ಯುವತಿಯ ಕಿವಿಯಿಂದ ರಕ್ತ ಸೋರುತ್ತಿರುವುದನ್ನು ನೋಡಿದ ಸಿಬ್ಬಂದಿಗಳು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಮುಂದುವರೆಸಿದ್ದು, ವಿಚಾರಣೆ ವೇಳೆ ಯುವತಿ ನಡೆದ ವಿಚಾರವನ್ನು ತಿಳಿಸಿದ್ದಾಳೆ. ತಿರುವನಂತಪುರಂ ನಿವಾಸಿಯಾಗಿರುವ ಯುವತಿ ತಾನು ಮತ್ತು ತನ್ನ ಪ್ರೇಮಿ ಒಟ್ಟಿಗೆ ಸಾಯಲು ನಿರ್ಧರಿಸಿದ್ದೆವು. ಹೀಗಾಗಿ ಹೋಟೆಲ್‌ ರೂಮ್‌ ಬುಕ್‌ ಮಾಡಿಕೊಂಡಿದ್ದೆವು ಎಂದು ತಿಳಿಸಿದ್ದು, ಭಾನುವಾರ ಈ ಜೋಡಿಗಳು ಹೋಟೆಲ್‌ಗೆ ಬಂದಿದ್ದಾರೆ.

ಯುವತಿ ಭಾನುವಾರ ಮನೆಗೆ ಬಾರದ ಹಿನ್ನೆಲೆಯಲ್ಲಿ ಅವಳ ಕುಟುಂಬದವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago