ಬೆಂಗಳೂರು: ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರೋದು ನೋಡಿದರೆ ನನಗೆ ಕಲ್ಲು ಹೊಡೆಯಬೇಕು ಅನ್ನಿಸುತ್ತದೆ ಎಂದು ನಟಿ ರಶ್ಮಿಕಾ ಮಂದಣ್ಣ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ ಮತ್ತು ತೆಲುಗು ನಟ ನಿತಿನ್ ಅಭಿನಯದ ‘ಭೀಷ್ಮ’ ಸಿನಿಮಾ ಫೆಬ್ರವರಿ 21ರಂದು ರಿಲೀಸ್ ಆಗುತ್ತಿದೆ. ಸದ್ಯಕ್ಕೆ ಇಬ್ಬರು ಸಿನಿಮಾ ಪ್ರಚಾರದ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೆ ರಶ್ಮಿಕಾ ಮತ್ತು ನಿತಿನ್ ಮಾಧ್ಯಮಕ್ಕೆ ಸಂದರ್ಶನವೊಂದನ್ನು ನೀಡಿದ್ದಾರೆ. ಈ ಸಂದರ್ಶನದಲ್ಲಿ ರಶ್ಮಿಕಾ ಲವ್, ಮದುವೆ, ಕ್ರಶ್ ಬಗ್ಗೆ ಮಾತನಾಡಿರೋದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಹೀರೋಯಿನ್ ಆಗುವ ಮೊದಲು ಮತ್ತು ನಂತರ ನಿಮಗೆ ಪ್ರೇಮಿಗಳ ದಿನ ಹೇಗೆ ಅನ್ನಿಸುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನನಗೆ ವ್ಯಾಲೆಂಟೈನ್ಸ್ ಡೇ ಅಂದರೆ ಇಷ್ಟ ಇಲ್ಲ. ಪ್ರೇಮಿಗಳು ಕೈ ಕೈ ಹಿಡಿದುಕೊಂಡು ಹೋಗುವುದನ್ನು ನೋಡಿದರೆ ಕೋಪ ಬರುತ್ತೆ. ಅದರಲ್ಲೂ ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರುವುದನ್ನು ನೋಡಿದರೆ ಕಲ್ಲಲ್ಲಿ ಹೊಡಿಯಬೇಕು ಎನ್ನಿಸುತ್ತದೆ. ಯಾಕೆ ಅಂತ ಗೊತ್ತಿಲ್ಲ ಎಂದು ರಶ್ಮಿಕಾ ಹೇಳಿದ್ದಾರೆ.
ನಾನು ಪ್ರೇಮಿಗಳ ದಿನಾಚರಣೆ ಸೆಲೆಬ್ರೆಷನ್ ಮಾಡಿಲ್ಲ. ನನಗೆ ಯಾರೂ ಪ್ರಪೋಸ್ ಮಾಡಿಲ್ಲ ಎಂದರು. ಇನ್ನೂ ಯಾರ ಮೇಲೆ ಕ್ರಶ್ ಆಗಿದೆ ಎಂಬುದರ ಬಗ್ಗೆ ಕೇಳಿದಾಗ, ನನಗೆ ಚಿಕ್ಕ ವಯಸ್ಸಿನಲ್ಲಿದ್ದಾಗ ದಳಪತಿ ವಿಜಯ್ ಮೇಲೆ ಕ್ರಶ್ ಆಗಿತ್ತು ಎಂದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…