ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರೋದು ನೋಡಿದರೆ ನನಗೆ ಕಲ್ಲು ಹೊಡೆಯಬೇಕು ಅನ್ನಿಸುತ್ತದೆ : ರಶ್ಮಿಕಾ ಮಂದಣ್ಣ -Vishwanews24

ಬೆಂಗಳೂರು: ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರೋದು ನೋಡಿದರೆ ನನಗೆ ಕಲ್ಲು ಹೊಡೆಯಬೇಕು ಅನ್ನಿಸುತ್ತದೆ ಎಂದು ನಟಿ ರಶ್ಮಿಕಾ ಮಂದಣ್ಣ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ತೆಲುಗು ನಟ ನಿತಿನ್ ಅಭಿನಯದ ‘ಭೀಷ್ಮ’ ಸಿನಿಮಾ ಫೆಬ್ರವರಿ 21ರಂದು ರಿಲೀಸ್ ಆಗುತ್ತಿದೆ. ಸದ್ಯಕ್ಕೆ ಇಬ್ಬರು ಸಿನಿಮಾ ಪ್ರಚಾರದ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೆ ರಶ್ಮಿಕಾ ಮತ್ತು ನಿತಿನ್ ಮಾಧ್ಯಮಕ್ಕೆ ಸಂದರ್ಶನವೊಂದನ್ನು ನೀಡಿದ್ದಾರೆ. ಈ ಸಂದರ್ಶನದಲ್ಲಿ ರಶ್ಮಿಕಾ ಲವ್, ಮದುವೆ, ಕ್ರಶ್ ಬಗ್ಗೆ ಮಾತನಾಡಿರೋದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೀರೋಯಿನ್ ಆಗುವ ಮೊದಲು ಮತ್ತು ನಂತರ ನಿಮಗೆ ಪ್ರೇಮಿಗಳ ದಿನ ಹೇಗೆ ಅನ್ನಿಸುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನನಗೆ ವ್ಯಾಲೆಂಟೈನ್ಸ್ ಡೇ ಅಂದರೆ ಇಷ್ಟ ಇಲ್ಲ. ಪ್ರೇಮಿಗಳು ಕೈ ಕೈ ಹಿಡಿದುಕೊಂಡು ಹೋಗುವುದನ್ನು ನೋಡಿದರೆ ಕೋಪ ಬರುತ್ತೆ. ಅದರಲ್ಲೂ ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರುವುದನ್ನು ನೋಡಿದರೆ ಕಲ್ಲಲ್ಲಿ ಹೊಡಿಯಬೇಕು ಎನ್ನಿಸುತ್ತದೆ. ಯಾಕೆ ಅಂತ ಗೊತ್ತಿಲ್ಲ ಎಂದು ರಶ್ಮಿಕಾ ಹೇಳಿದ್ದಾರೆ.

ನಾನು ಪ್ರೇಮಿಗಳ ದಿನಾಚರಣೆ ಸೆಲೆಬ್ರೆಷನ್ ಮಾಡಿಲ್ಲ. ನನಗೆ ಯಾರೂ ಪ್ರಪೋಸ್ ಮಾಡಿಲ್ಲ ಎಂದರು. ಇನ್ನೂ ಯಾರ ಮೇಲೆ ಕ್ರಶ್ ಆಗಿದೆ ಎಂಬುದರ ಬಗ್ಗೆ ಕೇಳಿದಾಗ, ನನಗೆ ಚಿಕ್ಕ ವಯಸ್ಸಿನಲ್ಲಿದ್ದಾಗ ದಳಪತಿ ವಿಜಯ್ ಮೇಲೆ ಕ್ರಶ್ ಆಗಿತ್ತು ಎಂದರು.

Vishwa News 24

Recent Posts

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

2 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

2 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

2 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

3 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

3 hours ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

3 hours ago