ಬೆಂಗಳೂರು: ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರೋದು ನೋಡಿದರೆ ನನಗೆ ಕಲ್ಲು ಹೊಡೆಯಬೇಕು ಅನ್ನಿಸುತ್ತದೆ ಎಂದು ನಟಿ ರಶ್ಮಿಕಾ ಮಂದಣ್ಣ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ ಮತ್ತು ತೆಲುಗು ನಟ ನಿತಿನ್ ಅಭಿನಯದ ‘ಭೀಷ್ಮ’ ಸಿನಿಮಾ ಫೆಬ್ರವರಿ 21ರಂದು ರಿಲೀಸ್ ಆಗುತ್ತಿದೆ. ಸದ್ಯಕ್ಕೆ ಇಬ್ಬರು ಸಿನಿಮಾ ಪ್ರಚಾರದ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೆ ರಶ್ಮಿಕಾ ಮತ್ತು ನಿತಿನ್ ಮಾಧ್ಯಮಕ್ಕೆ ಸಂದರ್ಶನವೊಂದನ್ನು ನೀಡಿದ್ದಾರೆ. ಈ ಸಂದರ್ಶನದಲ್ಲಿ ರಶ್ಮಿಕಾ ಲವ್, ಮದುವೆ, ಕ್ರಶ್ ಬಗ್ಗೆ ಮಾತನಾಡಿರೋದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಹೀರೋಯಿನ್ ಆಗುವ ಮೊದಲು ಮತ್ತು ನಂತರ ನಿಮಗೆ ಪ್ರೇಮಿಗಳ ದಿನ ಹೇಗೆ ಅನ್ನಿಸುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನನಗೆ ವ್ಯಾಲೆಂಟೈನ್ಸ್ ಡೇ ಅಂದರೆ ಇಷ್ಟ ಇಲ್ಲ. ಪ್ರೇಮಿಗಳು ಕೈ ಕೈ ಹಿಡಿದುಕೊಂಡು ಹೋಗುವುದನ್ನು ನೋಡಿದರೆ ಕೋಪ ಬರುತ್ತೆ. ಅದರಲ್ಲೂ ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರುವುದನ್ನು ನೋಡಿದರೆ ಕಲ್ಲಲ್ಲಿ ಹೊಡಿಯಬೇಕು ಎನ್ನಿಸುತ್ತದೆ. ಯಾಕೆ ಅಂತ ಗೊತ್ತಿಲ್ಲ ಎಂದು ರಶ್ಮಿಕಾ ಹೇಳಿದ್ದಾರೆ.
ನಾನು ಪ್ರೇಮಿಗಳ ದಿನಾಚರಣೆ ಸೆಲೆಬ್ರೆಷನ್ ಮಾಡಿಲ್ಲ. ನನಗೆ ಯಾರೂ ಪ್ರಪೋಸ್ ಮಾಡಿಲ್ಲ ಎಂದರು. ಇನ್ನೂ ಯಾರ ಮೇಲೆ ಕ್ರಶ್ ಆಗಿದೆ ಎಂಬುದರ ಬಗ್ಗೆ ಕೇಳಿದಾಗ, ನನಗೆ ಚಿಕ್ಕ ವಯಸ್ಸಿನಲ್ಲಿದ್ದಾಗ ದಳಪತಿ ವಿಜಯ್ ಮೇಲೆ ಕ್ರಶ್ ಆಗಿತ್ತು ಎಂದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…