ದಾವಣಗೆರೆ: ಪ್ರೇಮಿಗಳ ದಿನವೇ ದಾವಣಗೆರೆ ಜಿಲ್ಲೆಯ ಇಬ್ಬರು ಐಎಎಸ್ ಅಧಿಕಾರಿಗಳು ಹಸೆಮಣೆ ಏರಿದ್ದಾರೆ. ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಎಸ್ ಅಶ್ವತಿ ಹಾಗೂ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಪ್ರೇಮ ವಿವಾಹವಾಗಿದ್ದಾರೆ.
ಪ್ರೇಮಿಗಳ ದಿನದಂದೇ ಖಡಕ್ ಐಪಿಎಸ್ ಅಧಿಕಾರಿಗಳು ಸಪ್ತಪದಿ ತುಳಿಯುತ್ತಿದ್ದು, ಕೇರಳದ ಕೋಯಿಕ್ಕೋಡ್ನಲ್ಲಿ ಮದುವೆ ಸಮಾರಂಭ ನಡೆಯಲಿದೆ. ದಾವಣಗೆರೆ ಡಿಸಿ ಡಾ.ಬಗಾದಿ ಗೌತಮ್ ಮೂಲತಃ ಆಂಧ್ರ ಪ್ರದೇಶದ ವಿಶಾಖಪಟ್ಟಣಂದವರು ಹಾಗೂ ಎಸ್. ಅಶ್ವತಿ ಕೇರಳದವರು. ಕೇವಲ ಅರ್ಧ ಗಂಟೆಯಲ್ಲಿ ಸರಳ ವಿವಾಹ ಮುಗಿದಿದ್ದು ಹೊಸ ಜೀವನಕ್ಕೆ ಅಧಿಕಾರಿಗಳು ಕಾಲಿಟ್ಟಿದ್ದಾರೆ.
ನಾಲ್ಕು ತಿಂಗಳ ಹಿಂದೆ ರಾಯಚೂರಿನಿಂದ ದಾವಣಗೆರೆಗೆ ಬಂದ ಜಿಲ್ಲಾಧಿಕಾರಿ ಬಗಾದಿ ಗೌತಮ್ ಮತ್ತು ಸಿಇಒ ಅಶ್ವತಿ ಕೆಲ ಸಭೆ ಸಮಾರಂಭಗಳಲ್ಲಿ ಭಾಗವಹಿಸಿದ್ದರೂ ತಮ್ಮ ಪ್ರೇಮದ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಆದರೆ ತಾವಿಬ್ಬರೂ ಮದುವೆಯಾಗುತ್ತಿರುವುದಾಗಿ ಫೆ.1ರಂದು ಹೇಳಿ ಮದುವೆಯ ಆಮಂತ್ರಣ ಪತ್ರಿಕೆ ನೀಡಿದಾಗ ಪ್ರತಿಯೊಬ್ಬರು ತಬ್ಬಿಬ್ಬಾದರು. ಆ ಸಮಯದಲ್ಲಿ ಅವರು ತಮ್ಮಿಬ್ಬರ ನಡುವಿನ ಹಳೆಯ ಗೆಳೆತನ, ಪ್ರೀತಿಯ ಗುಟ್ಟು ರಟ್ಟು ಮಾಡಿದ್ದರು.
ಇದೇ 17ರಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…