Featured

ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದ ಪ್ರಿಯಕರ… Vishwanews24

ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದ ಪ್ರಿಯಕರ…

ನವದೆಹಲಿ:  ತನ್ನ ಪ್ರೇಯಸಿಯನ್ನೇ ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿ ನಗರ ತುಂಬೆಲ್ಲಾ ಎಸೆದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಘಟನೆಯಲ್ಲಿ ಶ್ರದ್ಧಾ ಮೃತ ಯುವತಿಯಾಗಿದ್ದು, ಅಫ್ತಾಬ್ ಅಮೀನ್ ಪೂನಾವಾಲಾ ಪ್ರಕರಣದ ಆರೋಪಿಯಾಗಿದ್ದಾನೆ.

ಘಟನೆ ವಿವರ: 26 ವರ್ಷದ ಶ್ರದ್ಧಾ ಮುಂಬೈನ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು, ಅಲ್ಲಿ ಅವಳು ಪೂನಾವಾಲಾ ನನ್ನು ಪ್ರೀತಿಸುತಿದ್ದಳು ಎನ್ನಲಾಗಿದೆ. ಅದಲ್ಲದೆ ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದಾರೆ ಮತ್ತು ಒಟ್ಟಿಗೆ ಒಂದೇ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಈ ವಿಚಾರ ಯುವತಿಯ ಮನೆಯವರಿಗೆ ತಿಳಿದು ಪ್ರೀತಿಗೆ ನಿರಾಕರಿಸಿದ್ದಾರೆ, ಇದರಿಂದ ಮನನೊಂದ ಇಬ್ಬರು ಮುಂಬೈಯಿಂದ ದೆಹಲಿಗೆ ಓಡಿಹೋಗಿ ಅಲ್ಲಿ ಜೀವನ ಆರಂಭಿಸಿದ್ದಾರೆ, ಅಲ್ಲಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ, ಇತ್ತ ಪ್ರೀತಿಗೆ ನಿರಾಕರಿಸಿದ ಪೋಷಕರ ಕರೆಗಳನ್ನು ಯುವತಿ ಸ್ವೀಕರಿಸಲು ನಿರಾಕರಿಸಿದ್ದಾಳೆ, ಇದರಿಂದ ಗಾಬರಿಗೊಂಡ ಯುವತಿಯ ಪೋಷಕರು ಮುಂಬೈ ನಲ್ಲಿ ವಾಸಮಾಡುತ್ತಿದ್ದ ಯುವತಿಯ ಮನೆಗೆ ಬಂದಿದ್ದಾರೆ ಆದರೆ ಅಲ್ಲಿ ಮನೆಗೆ ಬೀಗ ಹಾಕಲಾಗಿತ್ತು ಗಾಬರಿಗೊಂಡ ಯುವತಿಯ ಪೋಷಕರು ಕೂಡಲೇ ತನ್ನ ಮಗಳನ್ನು ಪೂನಾವಾಲಾ ಅಪಹರಿಸಿದ್ದಾನೆ ಎಂದು ಠಾಣೆಯಲ್ಲಿ ದೂರು ನೀಡಿದ್ದಾರೆ.

ನ. 23 ರಂದು ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷ ದೀಪೋತ್ಸವ.. ರಾಜ್ಯಾದ್ಯಂತ ಭಕ್ತರಿಗೆ ಕುಣಿತ ಭಜನೆ ಸೇವೆಗೆ ಅವಕಾಶ – Vishwanews24

ಅತ್ತ ಮುಂಬೈ ಪೊಲೀಸರು ಯುವತಿಯ ಹುಡುಕಾಟ ನಡೆಸಿದರೆ, ಇತ್ತ ಯುವತಿ ಮತ್ತು ಪ್ರಿಯಕರನ ನಡುವೆ ನಡೆಯುತ್ತಿದ್ದ ಜಗಳ ಅತಿರೇಕಕ್ಕೆ ತಿರುಗಿ ಕೋಪಗೊಂಡ ಪೂನಾವಾಲಾ ಶ್ರದ್ಧಾಳನ್ನು ಹರಿತವಾದ ಆಯುಧದಿಂದ ಕೊಲೆ ಮಾಡಿ ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅವುಗಳನ್ನು ಇಡಲು ಫ್ರಿಡ್ಜ್ ನಲ್ಲಿ ಇಟ್ಟಿದ್ದಾನೆ ಬಳಿಕ ಹದಿನೆಂಟು ದಿನಗಳಲ್ಲಿ ಪ್ರತಿದಿನ ರಾತ್ರಿ ಎರಡು ಗಂಟೆಯ ಸುಮಾರಿಗೆ ದೇಹದ ತುಂಡುಗಳನ್ನು ದೆಹಲಿಯ ವಿವಿಧ ಸ್ಥಳಗಳಲ್ಲಿ ಎಸೆದು ಬಂದಿದ್ದನಂತೆ.

ಇತ್ತ ಮುಂಬೈ ಪೊಲೀಸರು ಪ್ರಕರಣ ಭೇದಿಸಲು ಹುಡುಕಾಟ ನಡೆಸಿದಾಗ ಮೊಬೈಲ್ ನೆಟ್ ವರ್ಕ್ ಪರಿಶೀಲಿಸಿದಾಗ ದೆಹಲಿಯಲ್ಲಿರುವ ಮಾಹಿತಿ ಲಭ್ಯವಾಗಿದೆ ಅದರಂತೆ ದೆಹಲಿಗೆ ಬಂದು ಪೂನಾವಾಲಾನನ್ನ ವಶಕ್ಕೆ ಪಡೆದು ತನಿಖೆ ನಡೆಸಿದಾಗ ತಾನು ಮಾಡಿದ ಕೃತ್ಯ ಬಾಯಿ ಬಿಟ್ಟಿದ್ದಾನೆ. ಘಟನೆಗೆ ಸಂಬಂಧಿಸಿ ಮುಂಬೈ ಪೊಲೀಸರು ಪೂನಾವಾಲನನ್ನು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಗೆ ನಾನು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧೆ: ಮುತಾಲಿಕ್ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago