ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ – vishwanews24
ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಶರಣಾದ ಪ್ರಿಯಕರ
ಬೆಳಗಾವಿ: ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ.
ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ (29) ಪ್ರೇಯಸಿ ಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೇಂಟಿಂಗ್ ಕೆಲಸ ಮಾಡ್ತಿದ್ದ ಪ್ರಶಾಂತ್ ಒಂದೂವರೆ ವರ್ಷದಿಂದ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಪ್ರಶಾಂತ್ ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿದ್ದ. ಈ ವೇಳೆ ಯುವತಿಯ ತಾಯಿ, ಚೆನ್ನಾಗಿ ಕೆಲಸ ಮಾಡಿ, ಸಂಬಳ ಜಾಸ್ತಿ ತೆಗೆದುಕೋ ಎಂದು ಬುದ್ಧಿವಾದ ಹೇಳಿದ್ದರು.
ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ ಶ್ಲಾಘನೀಯ : ರಮೇಶ್ ಕಾಂಚನ್ – vishwanews24
ಪ್ರಶಾಂತ್ ತನ್ನ ಪ್ರೇಯಸಿಯನ್ನು ಆಕೆಯ ಚಿಕ್ಕಮ್ಮನ ಮನೆಗೆ ಕರೆಸಿಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಗೆ ವಿಷ ಕುಡಿಸಲು ಯತ್ನಿಸಿದ್ದ. ಬಳಿಕ ಚಾಕುವಿನಿಂದ ಆಕೆಯ ಕತ್ತು ಸೀಳಿ, ಅದೇ ಚಾಕುವಿನಿಂದ ಆತನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸಿಪಿಐ ಎಸ್.ಎಸ್.ಸಿಮಾನಿ, ಎಸಿಪಿ ಸಂತೋಷ ಸತ್ಯನಾಯಕರಿಂದ ಮಾಹಿತಿ ಪಡೆದರು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಬಳಿಕ ಮನೆಯವರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿ ದಿಲೀಪ್ ಹೆಗ್ಡೆ ಜಾಮೀನು ಅರ್ಜಿ ತಿರಸ್ಕಾರ – vishwanews24
