ಬೆಳಗಾವಿ: ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ.
ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ (29) ಪ್ರೇಯಸಿ ಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೇಂಟಿಂಗ್ ಕೆಲಸ ಮಾಡ್ತಿದ್ದ ಪ್ರಶಾಂತ್ ಒಂದೂವರೆ ವರ್ಷದಿಂದ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಪ್ರಶಾಂತ್ ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿದ್ದ. ಈ ವೇಳೆ ಯುವತಿಯ ತಾಯಿ, ಚೆನ್ನಾಗಿ ಕೆಲಸ ಮಾಡಿ, ಸಂಬಳ ಜಾಸ್ತಿ ತೆಗೆದುಕೋ ಎಂದು ಬುದ್ಧಿವಾದ ಹೇಳಿದ್ದರು.
ಪ್ರಶಾಂತ್ ತನ್ನ ಪ್ರೇಯಸಿಯನ್ನು ಆಕೆಯ ಚಿಕ್ಕಮ್ಮನ ಮನೆಗೆ ಕರೆಸಿಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಗೆ ವಿಷ ಕುಡಿಸಲು ಯತ್ನಿಸಿದ್ದ. ಬಳಿಕ ಚಾಕುವಿನಿಂದ ಆಕೆಯ ಕತ್ತು ಸೀಳಿ, ಅದೇ ಚಾಕುವಿನಿಂದ ಆತನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸಿಪಿಐ ಎಸ್.ಎಸ್.ಸಿಮಾನಿ, ಎಸಿಪಿ ಸಂತೋಷ ಸತ್ಯನಾಯಕರಿಂದ ಮಾಹಿತಿ ಪಡೆದರು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಬಳಿಕ ಮನೆಯವರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…