ಧಾರವಾಡ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರ ಸಹ ನೇಣಿಗೆ ಶರಣಾದ ಘಟನೆ ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಕೋಟಬಾಗಿ ಗ್ರಾಮದ ತರುಣ್ ಸಾಗರ್ ಕುರಕುರಿ (21) ಆತ್ಮಹತ್ಯೆಗೆ ಶರಣಾದ ಯುವಕ. ಈತ ನಗರದ ವಾಚ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ. ಆ.12 ರಂದು ಈತನ ಪ್ರೇಯಸಿ ಮೇಘಾ ಗುಬ್ಬನ್ನವರ್ (20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಳು.
ಮನೆಯಲ್ಲಿ ಹೆಚ್ಚು ಮೊಬೈಲ್ ಬಳಸುತ್ತಿದ್ದೀಯ ಎಂದು ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ಈಕೆಯ ಆತ್ಮಹತ್ಯೆ ಸುದ್ದಿ ಕೇಳಿ ಸ್ನೇಹಿತನ ರೂಮ್ನಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ತರುಣ್, ಗೆಳೆಯನ ರೂಮ್ನಲ್ಲಿ ಬಂದು ತಂಗಿದ್ದ. ಕಳೆದ ರಾತ್ರಿ ಗೆಳೆಯನ ಮುಂದೆ ಹುಡುಗಿ ಜೊತೆ ಜಗಳವಾಗಿದೆ, ಆಕೆಯ ಸಹೋದರನಿಗೆ ಈ ವಿಷಯ ಗೊತ್ತಾಗಿದೆ ಎಂದು ಹೇಳಿದ್ದ ಎನ್ನಲಾಗಿದೆ.
ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೇಘಾ ಹಾಗೂ ತರುಣ್ ಮಧ್ಯೆ ಪ್ರೇಮ ಕಹಾನಿ ಇತ್ತು ಎಂಬುದು ಇದೀಗ ಗೊತ್ತಾಗಿದೆ. ಈ ಬಗ್ಗೆ ತರಣ್ ಸಾಗರ್ ಪೋಷಕರಿಗೆ ಕೇಳಿದರೆ ಪ್ರೇಮದ ಬಗ್ಗೆ ಗೊತ್ತಿರಲಿಲ್ಲ. ಬೆಳಗ್ಗೆ ಫೋನ್ ಎತ್ತದೇ ಇದ್ದಾಗ ಹುಡುಕಾಟ ನಡೆಸಿದಾಗ, ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…
ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…
ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…
ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…
ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…
ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು…