ರಾಯಚೂರು: ಪ್ರೇಯಸಿ ಕೈಕೊಟ್ಟ ಹಿನ್ನೆಲೆ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರುಜಿಲ್ಲೆಯ ಮಾನ್ವಿ ಪಟ್ಟಣ ಜನತಾ ಹೌಸ್ ಕಾಲೋನಿಯಲ್ಲಿ ನಡೆದಿದೆ. ಮಾನ್ವಿ ನಿವಾಸಿ ವರುಣ್ (26)ಆತ್ಮಹತ್ಯೆಗೆ ಶರಣಾದ ಯುವಕ. ಇನ್ಸ್ಟ್ರಾಗ್ರಾಂ ಮೂಲಕ ಪರಿಚಯವಾಗಿದ್ದ ಯುವತಿ ಜೊತೆ ಮೃತ ವರುಣ್ ಪ್ರೀತಿ ಮಾಡಿದ್ದ. ಬಳಿಕ ಆ ಯುವತಿ ಬೇರೊಬ್ಬರ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಹಿನ್ನೆಲೆ ಮನನೊಂದು ವರುಣ್ ಮನೆಯಲ್ಲಿ ಫ್ಯಾನ್ಗೆ ನೇಣುಬಿಗಿದುಕೊಂಡು ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಯುವತಿ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿ ನಂತರ ಮುಖಾಮುಖಿ ಭೇಟಿಯಾಗಿದ್ದರು. ಬಳಿಕ ರಾಯಚೂರಿನಲ್ಲಿ ನರ್ಸಿಂಗ್ ಮಾಡುತ್ತಿದ್ದ ಯುವತಿ ಜೊತೆ ಪ್ರೇಮಾಂಕುರವಾಗಿದೆ. ಅದರಂತೆ ಕಳೆದ 5 ವರ್ಷದಿಂದ ವರುಣ್, ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ದಿಢೀರ್ ಪ್ರೇಯಸಿಗೆ ಬೇರೊಬ್ಬನ ಜೊತೆ ನಿಶ್ಚಿತಾರ್ಥವಾಗಿದಕ್ಕೆ ವರುಣ್ ತೀವ್ರ ಬೇಸರಗೊಂಡಿದ್ದ. ಈ ಹಿನ್ನಲೆ ಇಂದು ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ನಂತರ ವರುಣ್ ನೇಣಿಗೆ ಶರಣಾಗಿದ್ದಾನೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…