ಚಿಕ್ಕಬಳ್ಳಾಪುರ : 8 ತಿಂಗಳ ಹಿಂದೆಯಷ್ಟೇ ಸಪ್ತಪದಿ ತುಳಿದಿದ್ದ ಮಹಿಳೆ ತನ್ನ ಗಂಡ ಪರ ಸ್ತ್ರೀ ಜೊತೆ ಮೋಜು, ಮಸ್ತಿಯಲ್ಲಿ ಸುತ್ತಾಡಿದ್ದ ಪೋಟೋಗಳನ್ನು ನೋಡಿ ತೀವ್ರ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಣ್ಣೂರು ಕದಿರೇನಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಚಿಕ್ಕಬಳ್ಳಾಪುರ ತಾಲೂಕಿನ ಹೆಣ್ಣೂರು ಕದಿರೇನಹಳ್ಳಿ ಗ್ರಾಮದ 20 ವರ್ಷದ ಮೌನಿಕಾ ಎಂದು ಗುರುತಿಸಲಾಗಿದೆ.
ಹಿಜಬ್ ತೀರ್ಪು – ಉಡುಪಿ ಜಿಲ್ಲೆಯಾದ್ಯಂತ ಕಾಲೇಜುಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ – Vishwanews24
ಏನಿದು ಪ್ರಕರಣ?
ವಿಜಯದಶಮಿ ಹಿನ್ನೆಲೆಯಲ್ಲಿ ಮೌನಿಕಳನ್ನು ಪತಿ ಭಾರ್ಗವ ತವರು ಮನೆಗೆ ಕಳುಹಿಸಿದ್ದ. ಈ ವೇಳೆ ಭಾರ್ಗವ್ ತನ್ನ ಪ್ರೇಯಸಿ ಜೊತೆ ಪ್ರವಾಸ ಹೋಗಿದ್ದಾನೆ. ಸಾಲದಿದ್ದಕ್ಕೆ ಪ್ರೇಯಸಿ ಜೊತೆ ಮೋಜು, ಮಸ್ತಿಯಲ್ಲಿ ಸುತ್ತಾಡಿರುವ ಪೋಟೋ, ವಿಡಿಯೋಗಳನ್ನು ತವರು ಮನೆಯಲ್ಲಿದ್ದ ಪತ್ನಿ ಮೋನಿಕಾ ಮೊಬೈಲ್ಗೆ ರವಾನಿಸಿದ್ದಾನೆ. ಇದನ್ನು ನೋಡಿದ ಮೋನಿಕಾ ತವರು ಮನೆಯಲ್ಲಿಯೆ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ತನ್ನ ಗಂಡನೆ ಕಾರಣ ಅಂತ ಡೆತ್ ನೋಟ್ ಸಹ ಬರೆದಿಟ್ಟಿದ್ದಾಳೆ.
ಹಿಜಾಬ್ ಕುರಿತಾಗಿ ಸುಪ್ರೀಂ ವಿಸ್ತೃತ ಪೀಠದ ತೀರ್ಪಿಗೆ ಎಲ್ಲರೂ ಬದ್ಧರಾಗಬೇಕು..
ಮೋನಿಕಾ ತಂದೆ ತಾಯಿ ಬಡವರಾದರು ಕಷ್ಟಪಟ್ಟು ಆಕೆಯನ್ನು ಪದವಿವರೆಗೂ ಓದಿಸಿದ್ದರು. ಚಿಕ್ಕಬಳ್ಳಾಪುರ ನಗರ ಪ್ರಶಾಂತ್ ನಗರ ನಿವಾಸಿ 25 ವರ್ಷದ ಭಾರ್ಗವ್ ಕೊಟ್ಟು ಕಳೆದ 8 ತಿಂಗಳ ಹಿಂದೆಯಷ್ಟೇ ಅದ್ದೂರಿಯಾಗಿ ವಿವಾಹ ಮಾಡಿದ್ದರು. ಆದರೆ ಆತ ಮತ್ತೊಬ್ಬ ಯುವತಿಯನ್ನು ಪ್ರೇಮಿಸುತ್ತಿರು ಪೋಟೋಗಳನ್ನು ನೋಡಿ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಷಯ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…