Featured

ಪ್ರೇಯಸಿ ಜೊತೆಗಿನ ಫೋಟೊ ಪತ್ನಿಗೆ ಕಳುಹಿಸಿದ ಗಂಡ ; ಮನನೊಂದು ತವರು ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಪತ್ನಿ – Vishwanews24

ಪ್ರೇಯಸಿ ಜೊತೆಗಿನ ಫೋಟೊಗಳನ್ನ ಪತ್ನಿಗೆ ಕಳುಹಿಸಿದ ಗಂಡ ; ಮನನೊಂದು ತವರು ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಪತ್ನಿ

ಚಿಕ್ಕಬಳ್ಳಾಪುರ : 8 ತಿಂಗಳ ಹಿಂದೆಯಷ್ಟೇ ಸಪ್ತಪದಿ ತುಳಿದಿದ್ದ ಮಹಿಳೆ ತನ್ನ ಗಂಡ ಪರ ಸ್ತ್ರೀ ಜೊತೆ ಮೋಜು, ಮಸ್ತಿಯಲ್ಲಿ ಸುತ್ತಾಡಿದ್ದ ಪೋಟೋಗಳನ್ನು ನೋಡಿ ತೀವ್ರ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಹೆಣ್ಣೂರು ಕದಿರೇನಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಚಿಕ್ಕಬಳ್ಳಾಪುರ ತಾಲೂಕಿನ ಹೆಣ್ಣೂರು ಕದಿರೇನಹಳ್ಳಿ ಗ್ರಾಮದ 20 ವರ್ಷದ ಮೌನಿಕಾ ಎಂದು ಗುರುತಿಸಲಾಗಿದೆ.

ಹಿಜಬ್ ತೀರ್ಪು – ಉಡುಪಿ ಜಿಲ್ಲೆಯಾದ್ಯಂತ ಕಾಲೇಜುಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ – Vishwanews24

ಏನಿದು ಪ್ರಕರಣ?

ವಿಜಯದಶಮಿ ಹಿನ್ನೆಲೆಯಲ್ಲಿ ಮೌನಿಕಳನ್ನು ಪತಿ ಭಾರ್ಗವ ತವರು ಮನೆಗೆ ಕಳುಹಿಸಿದ್ದ. ಈ ವೇಳೆ ಭಾರ್ಗವ್‌ ತನ್ನ ಪ್ರೇಯಸಿ ಜೊತೆ ಪ್ರವಾಸ ಹೋಗಿದ್ದಾನೆ. ಸಾಲದಿದ್ದಕ್ಕೆ ಪ್ರೇಯಸಿ ಜೊತೆ ಮೋಜು, ಮಸ್ತಿಯಲ್ಲಿ ಸುತ್ತಾಡಿರುವ ಪೋಟೋ, ವಿಡಿಯೋಗಳನ್ನು ತವರು ಮನೆಯಲ್ಲಿದ್ದ ಪತ್ನಿ ಮೋನಿಕಾ ಮೊಬೈಲ್‌ಗೆ ರವಾನಿಸಿದ್ದಾನೆ. ಇದನ್ನು ನೋಡಿದ ಮೋನಿಕಾ ತವರು ಮನೆಯಲ್ಲಿಯೆ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ತನ್ನ ಗಂಡನೆ ಕಾರಣ ಅಂತ ಡೆತ್‌ ನೋಟ್‌ ಸಹ ಬರೆದಿಟ್ಟಿದ್ದಾಳೆ.

ಹಿಜಾಬ್ ಕುರಿತಾಗಿ ಸುಪ್ರೀಂ ವಿಸ್ತೃತ ಪೀಠದ ತೀರ್ಪಿಗೆ ಎಲ್ಲರೂ ಬದ್ಧರಾಗಬೇಕು..

ಮೋನಿಕಾ ತಂದೆ ತಾಯಿ ಬಡವರಾದರು ಕಷ್ಟಪಟ್ಟು ಆಕೆಯನ್ನು ಪದವಿವರೆಗೂ ಓದಿಸಿದ್ದರು. ಚಿಕ್ಕಬಳ್ಳಾಪುರ ನಗರ ಪ್ರಶಾಂತ್‌ ನಗರ ನಿವಾಸಿ 25 ವರ್ಷದ ಭಾರ್ಗವ್‌ ಕೊಟ್ಟು ಕಳೆದ 8 ತಿಂಗಳ ಹಿಂದೆಯಷ್ಟೇ ಅದ್ದೂರಿಯಾಗಿ ವಿವಾಹ ಮಾಡಿದ್ದರು. ಆದರೆ ಆತ ಮತ್ತೊಬ್ಬ ಯುವತಿಯನ್ನು ಪ್ರೇಮಿಸುತ್ತಿರು ಪೋಟೋಗಳನ್ನು ನೋಡಿ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಷಯ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago