ನವದೆಹಲಿ: , ದೆಹಲಿಯಲ್ಲಿ ಶ್ರದ್ಧಾ ಕೊಲೆ ಪ್ರಕರಣದ ತನಿಖೆಯ ಸಮಯದಲ್ಲಿ, ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಇನ್ನೊಬ್ಬ ಮಹಿಳೆಯನ್ನು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಬಾಡಿಗೆ ಅಪಾರ್ಟ್ಮೆಂಟ್ಗೆ ಒಂದು ದಿನದಂದು ಕರೆತಂದಿದ್ದಾನೆ ಎಂದು ತಿಳಿದುಬಂದಿದೆ.
ಖಾಸಗಿ ಮಾಧ್ಯಮಮೊಂದರ ವರದಿಯ ಪ್ರಕಾರ, ಅಫ್ತಾಬ್ ವಿಚಾರಣೆಯ ಸಮಯದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿ ಪ್ರಕಾರ ಶ್ರದ್ಧಾ ಕೊಲೆಯ ಬಳಿಯ ಅಫ್ತಾಬ್ ಬಂಬ್ಲ್ ಎಂಬ ಡೇಟಿಂಗ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಮತ್ತೊಂದು ಮಹಿಳೆಯ ಸಂಪರ್ಕ ಸಾಧಿಸಿದ್ದ. ಶ್ರದ್ಧಾ ದೇಹದ ಕತ್ತರಿಸಿ ತುಂಡಾಗಿಸಿ, ಅದನ್ನು ದಕ್ಷಿಣ ದೆಹಲಿಯ ಮೆಹ್ರೌಲಿಯ ಅಪಾರ್ಟ್ಮೆಂಟ್ನ ಫ್ರಿಡ್ಜ್ನಲ್ಲಿ ಇಟ್ಟಿರುವಾಗಲೇ ಹೊಸ ಗೆಳತಿಯನ್ನು ಮನೆಗೆ ಕರೆತಂದಿದ್ದ. ಶ್ರದ್ಧಾಳನ್ನು ಕೂಡ ಈತ 2019ರಲ್ಲಿ ಇದೇ ಆ್ಯಪ್ನಲ್ಲಿ ಭೇಟಿಯಾಗಿದ್ದ ಎಂದು ವರದಿ ಹೇಳಿದೆ.
ವರದಿ ಪ್ರಕಾರ ಶ್ರದ್ಧಾ ಕೊಲೆಯ ಬಳಿಯ ಅಫ್ತಾಬ್ ಬಂಬ್ಲ್ ಎಂಬ ಡೇಟಿಂಗ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಮತ್ತೊಂದು ಮಹಿಳೆಯ ಸಂಪರ್ಕ ಸಾಧಿಸಿದ್ದ. ಶ್ರದ್ಧಾ ದೇಹದ ಕತ್ತರಿಸಿ ತುಂಡಾಗಿಸಿ, ಅದನ್ನು ದಕ್ಷಿಣ ದೆಹಲಿಯ ಮೆಹ್ರೌಲಿಯ ಅಪಾರ್ಟ್ಮೆಂಟ್ನ ಫ್ರಿಡ್ಜ್ನಲ್ಲಿ ಇಟ್ಟಿರುವಾಗಲೇ ಹೊಸ ಗೆಳತಿಯನ್ನು ಮನೆಗೆ ಕರೆತಂದಿದ್ದ. ಶ್ರದ್ಧಾಳನ್ನು ಕೂಡ ಈತ 2019ರಲ್ಲಿ ಇದೇ ಆ್ಯಪ್ನಲ್ಲಿ ಭೇಟಿಯಾಗಿದ್ದ ಎಂದು ವರದಿ ಹೇಳಿದೆ.
ಹೊಸ ಗೆಳತಿ ಜೂನ್ ಮತ್ತು ಜುಲೈನಲ್ಲಿ ಕೆಲವು ಸಲ ಅಫ್ತಾಬ್ ಅಪಾರ್ಟ್ಮೆಂಟ್ಗೆ ಭೇಟಿ ನೀಡಿದ್ದಾಳೆ. ಅಡುಗೆ ಕೋಣೆಯ ಫ್ರಿಡ್ಜ್ನಲ್ಲಿ ಶ್ರದ್ಧಾ ದೇಹದ ಭಾಗಗಳಿರುವಾಗಲೇ ಈತ ಹೊಸ ಗೆಳತಿಗೆ ಮನೆಯಲ್ಲೇ ಆತಿಥ್ಯ ನೀಡಿದ್ದಾನೆ.
ಶ್ರದ್ಧಾ ಕೊಲೆಯ ನಂತರ ಆಕೆಯ ಕ್ರೆಡಿಟ್ ಕಾರ್ಡ್ಗಳ ಬಿಲ್ಗಳನ್ನು ಈತ ಪಾವತಿಸಿದ್ದ. ಆಕೆಯ ಸಾಮಾಜಿಕ ಜಾಲತಾಣದ ಪುಟಗಳಿಗೆ ಲಾಗಿನ್ ಆಗಿ ಮೆಸೇಜ್ಗಳಿಗೆ ಉತ್ತರಿಸಿದ್ದ. ಪೋಸ್ಟ್ಗಳನ್ನು ಮಾಡಿದ್ದ. ಆಕೆ ಬದುಕಿದ್ದಾಳೆ ಎಂದು ಬಿಂಬಿಸಲು ಆಕೆಯ ಸ್ನೇಹಿತರಿಗೆ ಆಕೆಯ ಖಾತೆಯಿಂದ ಸಂದೇಶಗಳನ್ನು ಕೂಡ ಕಳುಹಿಸಿದ್ದ ಎಂದು ವಿಚಾರಣೆಯಿಂದ ತಿಳಿದುಬಂದಿದೆ.
ಮುಂಬೈನಲ್ಲಿ ಇರುವಾಗಲೇ ಇಬ್ಬರ ನಡುವೆ ಸಾಕಷ್ಟು ಜಗಳ ನಡೆಯುತ್ತಿತ್ತು. ಸಂಬಂಧದ ಕುರಿತು ಅನುಮಾನಗೊಂಡಿದ್ದ ಇಬ್ಬರೂ ಫೋನ್ ಜಿಪಿಎಸ್ ಮತ್ತು ಫೋಟೊಗಳನ್ನು ಟ್ರೇಸ್ ಮಾಡುತ್ತಿದ್ದರು. ಸಂಬಂಧ ಸುಧಾರಣೆಗಾಗಿ ಏಪ್ರಿಲ್ನಲ್ಲಿ ಹಿಮಾಚಲ ಪ್ರದೇಶ ಪ್ರವಾಸ ಯೋಜಿಸಿದ್ದರು. ಅದಾದ ಬಳಿಕ ದೆಹಲಿಗೆ ಸ್ಥಳಾಂತರಗೊಂಡಿದ್ದರು.
ಮೇ.15ರಂದು ದೆಹಲಿಗೆ ಸ್ಥಳಾಂತರಗೊಂಡ 3 ದಿನಗಳ ನಂತರ ಮತ್ತೆ ಜಗಳವಾಗಿದ್ದು, ಶ್ರದ್ಧಾಳನ್ನು ಕೊಲೆಗೈದಿದ್ದಾನೆ. ಅಫ್ತಾಬ್ ಅಮೆರಿಕದ ಕ್ರೈಂ ಸರಣಿ ‘ಡೆಕ್ಸ್ಟರ್’ನಿಂದ ಸ್ಫೂರ್ತಿ ಪಡೆದಿದ್ದ. ಕೊಲೆಗಾಗಿ ಸಾಕಷ್ಟು ಸಂಶೋಧನೆ ಮಾಡಿದ್ದ. ಮನುಷ್ಯನ ದೇಹ ರಚನಾ ಶಾಸ್ತ್ರ ಅಧ್ಯಯನ ಮಾಡಿದ್ದ. ರಕ್ತದ ಕಲೆ ಕಾಣಿಸದಂತೆ ಮಾಡುವ ಮಾರ್ಗಗಳ ಕುರಿತು ಹುಡುಕಾಟ ನಡೆಸಿದ್ದ ಎಂದು ವರದಿಯಾಗಿದೆ.
‘ಹುಡುಗಿಯೊಬ್ಬಳು ಕಾಣೆಯಾದ ಮತ್ತೊಂದು ದೂರು ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಮತ್ತು ವಿಚಾರಣೆಯ ಸಮಯದಲ್ಲಿ, ಕಾಣೆಯಾದ ಹುಡುಗಿಯ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ಮತ್ತು ವಿವರಗಳನ್ನು ಕೇಳಲಾಗಿದೆ’ ಎಂದು ನಗರದ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಅಂಕಿತ್ ಚೌಹಾಣ್ ಹೇಳಿದ್ದಾರೆ.
ನ. 18 ರಂದು ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ – Vishwanews24
ಅಫ್ತಾಬ್ ಇದೇ ರೀತಿ 3–4 ಹುಡುಗಿಯರಿಗೆ ಮೋಸ ಮಾಡಿದ್ದಾನೆ. ಅವರೆಲ್ಲ ಬದುಕಿದ್ದಾರೆಯೇ ಇಲ್ಲವೇ ಎಂದು ಪತ್ತೆಹಚ್ಚಿ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಹೊಸ ಗೆಳತಿ ಜೂನ್ ಮತ್ತು ಜುಲೈನಲ್ಲಿ ಕೆಲವು ಸಲ ಅಫ್ತಾಬ್ ಅಪಾರ್ಟ್ಮೆಂಟ್ಗೆ ಭೇಟಿ ನೀಡಿದ್ದಾಳೆ. ಅಡುಗೆ ಕೋಣೆಯ ಫ್ರಿಡ್ಜ್ನಲ್ಲಿ ಶ್ರದ್ಧಾ ದೇಹದ ಭಾಗಗಳಿರುವಾಗಲೇ ಈತ ಹೊಸ ಗೆಳತಿಗೆ ಮನೆಯಲ್ಲೇ ಆತಿಥ್ಯ ನೀಡಿದ್ದಾನೆ.
ಶ್ರದ್ಧಾ ಕೊಲೆಯ ನಂತರ ಆಕೆಯ ಕ್ರೆಡಿಟ್ ಕಾರ್ಡ್ಗಳ ಬಿಲ್ಗಳನ್ನು ಈತ ಪಾವತಿಸಿದ್ದ. ಆಕೆಯ ಸಾಮಾಜಿಕ ಜಾಲತಾಣದ ಪುಟಗಳಿಗೆ ಲಾಗಿನ್ ಆಗಿ ಮೆಸೇಜ್ಗಳಿಗೆ ಉತ್ತರಿಸಿದ್ದ. ಪೋಸ್ಟ್ಗಳನ್ನು ಮಾಡಿದ್ದ. ಆಕೆ ಬದುಕಿದ್ದಾಳೆ ಎಂದು ಬಿಂಬಿಸಲು ಆಕೆಯ ಸ್ನೇಹಿತರಿಗೆ ಆಕೆಯ ಖಾತೆಯಿಂದ ಸಂದೇಶಗಳನ್ನು ಕೂಡ ಕಳುಹಿಸಿದ್ದ ಎಂದು ವಿಚಾರಣೆಯಿಂದ ತಿಳಿದುಬಂದಿದೆ.
ಮುಂಬೈನಲ್ಲಿ ಇರುವಾಗಲೇ ಇಬ್ಬರ ನಡುವೆ ಸಾಕಷ್ಟು ಜಗಳ ನಡೆಯುತ್ತಿತ್ತು. ಸಂಬಂಧದ ಕುರಿತು ಅನುಮಾನಗೊಂಡಿದ್ದ ಇಬ್ಬರೂ ಫೋನ್ ಜಿಪಿಎಸ್ ಮತ್ತು ಫೋಟೊಗಳನ್ನು ಟ್ರೇಸ್ ಮಾಡುತ್ತಿದ್ದರು. ಸಂಬಂಧ ಸುಧಾರಣೆಗಾಗಿ ಏಪ್ರಿಲ್ನಲ್ಲಿ ಹಿಮಾಚಲ ಪ್ರದೇಶ ಪ್ರವಾಸ ಯೋಜಿಸಿದ್ದರು. ಅದಾದ ಬಳಿಕ ದೆಹಲಿಗೆ ಸ್ಥಳಾಂತರಗೊಂಡಿದ್ದರು.
ಮೇ.15ರಂದು ದೆಹಲಿಗೆ ಸ್ಥಳಾಂತರಗೊಂಡ 3 ದಿನಗಳ ನಂತರ ಮತ್ತೆ ಜಗಳವಾಗಿದ್ದು, ಶ್ರದ್ಧಾಳನ್ನು ಕೊಲೆಗೈದಿದ್ದಾನೆ. ಅಫ್ತಾಬ್ ಅಮೆರಿಕದ ಕ್ರೈಂ ಸರಣಿ ‘ಡೆಕ್ಸ್ಟರ್’ನಿಂದ ಸ್ಫೂರ್ತಿ ಪಡೆದಿದ್ದ. ಕೊಲೆಗಾಗಿ ಸಾಕಷ್ಟು ಸಂಶೋಧನೆ ಮಾಡಿದ್ದ. ಮನುಷ್ಯನ ದೇಹ ರಚನಾ ಶಾಸ್ತ್ರ ಅಧ್ಯಯನ ಮಾಡಿದ್ದ. ರಕ್ತದ ಕಲೆ ಕಾಣಿಸದಂತೆ ಮಾಡುವ ಮಾರ್ಗಗಳ ಕುರಿತು ಹುಡುಕಾಟ ನಡೆಸಿದ್ದ ಎಂದು ವರದಿಯಾಗಿದೆ.
ಬಂಟ್ವಾಳ: ಸಿಡಿಲು ಬಡಿದು ಬಾಲಕ ಸಾವು – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…