ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಪಂದ್ಯಾಟಕ್ಕೆ ಕೊರೊನಾ ಅಡ್ಡಿಯಾಗಿದೆ. 2 ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಮಶಾಲ್ ಸ್ಪೋರ್ಟ್ಸ್ ಆಯೋಜಕತ್ವದಲ್ಲಿ ವಿವೋ ಪ್ರೊ ಕಬಡ್ಡಿ 8ನೇ ಆವೃತ್ತಿ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ಹಾಗೂ ಕನ್ವೆನ್ಷನ್ ಸೆಂಟರ್ನಲ್ಲಿ ಕಠಿಣ ಬಯೋ ಬಬಲ್ ಮೂಲಕ ಟೂರ್ನಿ ನಡೆಯುತ್ತಿದೆ. ಆದರೆ ಇದೀಗ ಪಾಟ್ನಾ ಪೈರೇಟ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ 2 ತಂಡಗಳ ಕೆಲ ಪಂದ್ಯಗಳನ್ನು ಮುಂದೂಡಲಾಗಿದೆ. ಅಲ್ಲದೆ ಟೂರ್ನಿಯ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಿದೆ.
ಈ ಹಿಂದೆ ದಿನದಲ್ಲಿ ಒಟ್ಟು 2 ಪಂದ್ಯಗಳು ನಡೆಯುತ್ತಿತ್ತು. ಶನಿವಾರ ಮತ್ತು ಭಾನುವಾರ 3 ಪಂದ್ಯಗಳು ನಡೆಯುತ್ತಿತ್ತು. ಇಂದಿನಿಂದ ಮುಂದಿನ ಶುಕ್ರವಾರದ ವರೆಗೆ ಪ್ರತಿದಿನ ಕೇವಲ 1 ಪಂದ್ಯ ನಡೆಯಲಿದೆ. ಜೊತೆಗೆ ಶನಿವಾರ ಮತ್ತು ಭಾನುವಾರ 3 ಪಂದ್ಯಗಳ ಬದಲಾಗಿ 2 ಪಂದ್ಯಗಳು ನಡೆಯಲಿದೆ ಎಂದು ವರದಿಯಾಗಿದೆ.
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…