Featured

ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ : ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ – vishwanews24

ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ : ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ

ಬೆಂಗಳೂರು: ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ, ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸೆಲ್ ಮಾಡಲು ಬಂದಿರುವ ಘಟನೆ ವೈಯಾಲಿಕಾವಲ್‌ನಲ್ಲಿ ನಡೆದಿದೆ.

ಸಂಜೆ 4:30ರ ಸುಮಾರಿಗೆ ಬಿಳಿಬಣ್ಣದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್ ಆಫೀಸ್‌ಗೆ ಬಂದಿದ್ದರು. ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ ಹೇಳಿದ್ದಾರೆ. ಮೂಟೆ ಅಲುಗಾಡ್ತಿರೋದು ನೋಡಿ ಕೊರಿಯರ್ ಕಚೇರಿಯಲ್ಲಿದ್ದ ಇಬ್ಬರು ಮಹಿಳಾ ಸಿಬ್ಬಂದಿ ಗಾಬರಿಯಾಗಿದ್ದಾರೆ. ಮೂಟೆಯನ್ನ ಓಪನ್ ಮಾಡಿದಾಗ ವೃದ್ದನೊಬ್ಬ ಮೂಟೆಯಿಂದ ಎದ್ದು ಹೊರನಡೆದಿದ್ದಾನೆ.

ಇದನ್ನೂ ಓದಿ:

ವೃದ್ಧ ಹೊರನಡೆಯುತ್ತಿದ್ದಂತೆ ಕೊರಿಯರ್ ಪಾರ್ಸೆಲ್ ಮಾಡಲು ಬಂದಿದ್ದ ಇಬ್ಬರು ಮಹಿಳೆಯರು, ಪುರುಷರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಮೂಟೆಯಲ್ಲಿದ್ದ ವ್ಯಕ್ತಿಗೆ ಮಾತನಾಡಲು ಕೂಡ ಬರುತ್ತಿರಲಿಲ್ಲ. ಈ ಬಗ್ಗೆ ಕೊರಿಯರ್ ಆಫೀಸ್‌ನ ಸಿಬ್ಬಂದಿ ಭಯಪಟ್ಟಿದ್ದು, ವೈಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಐವರನ್ನು ಕರೆಸಿ ವಿಚಾರಣೆ ನಡೆಸಿದಾಗ ಒಂದೇ ಕುಟುಂಬದವರು ಸೇರಿಕೊಂಡು ಪ್ರ್ಯಾಂಕ್‌ ಮಾಡಿರುವುದು ಗೊತ್ತಾಗಿದೆ. ಯುಗಾದಿ ಮತ್ತು ರಂಜನ್ ಹಬ್ಬ ಒಟ್ಟಿಗೆ ಬಂದಿದೆ. ಹೀಗಾಗಿ ಬಸ್‌ನಲ್ಲಿ ಸೀಟ್ ಸಿಗಲ್ಲ ಅನ್ನೋ ಕಾರಣಕ್ಕೆ ವ್ಯಕ್ತಿಯನ್ನು ಪಾರ್ಸೆಲ್ ಮಾಡುವ ವಿಷಯ ಇಟ್ಟುಕೊಂಡು ವಿಡಿಯೋ ಮಾಡಲು ಈ ರೀತಿ ಮಾಡಿದ್ದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ. ಅದಕ್ಕೆ ಪೊಲೀಸರು ಈ ರೀತಿ ಒಬ್ಬ ವ್ಯಕ್ತಿಯನ್ನ ಚೀಲದಲ್ಲಿ ತರೋದು ತಪ್ಪು ಅನ್ನೋದು ಗೊತ್ತಿಲ್ವಾ? ನಿಮ್ಮ ಹುಡುಗಾಟಕ್ಕೆ ಚೀಲದಲ್ಲಿದ್ದ ವ್ಯಕ್ತಿ ಉಸಿರುಗಟ್ಟಿ ಸತ್ತಿದ್ರೆ, ಇಲ್ಲ ಆರೋಗ್ಯ ಸಮಸ್ಯೆ ಆಗಿದ್ರೇ ಯಾರು ಹೊಣೆ? ಒಂದು ವೇಳೆ ಕೊರಿಯರ್ ಕಚೇರಿಯ ಸಿಬ್ಬಂದಿಗೆ ಏನಾದರೂ ಆಗಿದ್ರೇ ಯಾರು ಹೊಣೆ? ರೀಲ್ಸ್‌ಗಾಗಿ ಈ ರೀತಿ ಹುಡುಕಾಟ ಮಾಡೋದು ಸರಿನಾ? ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:

ಈ ಫ್ಯಾಮಿಲಿ `ಮಾಂಕ್ ಪ್ರಾಂಕ್’ ಎಂಬ ಅಕೌಂಟ್‌ನ್ನು ಹೊಂದಿದ್ದು, ಗಂಡ, ಹೆಂಡತಿ, ಅತ್ತೆ, ಮಾವ ಮತ್ತು ಮೈದುನ ಸೇರಿಕೊಂಡು ರೀಲ್ಸ್, ಪ್ರ್ಯಾಂಕ್‌ ಮಾಡುತ್ತಿರುತ್ತಾರೆ. ಈ ಬಗ್ಗೆ ಕುಟುಂಬಸ್ಥರು ಮಾತನಾಡಿ, ನಾವು ಬಸ್ ರಶ್ ವಿಚಾರದಲ್ಲಿ ಪ್ರ್ಯಾಂಕ್‌ ಮಾಡಲು ಹೋಗಿದ್ವಿ, ಅದು ಈ ರೀತಿ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನಾವು ತಪ್ಪು ಮಾಡಿದ್ದೇವೆ, ಅದರಿಂದ ಹೀಗೆ ಕಷ್ಟ ಆಗುತ್ತೆ ಅಂತಾ ಗೊತ್ತಿರಲಿಲ್ಲ. ಪೊಲೀಸರು ಕರೆಸಿ ಬುದ್ಧಿ ಹೇಳಿದ್ರು, ಇನ್ಮುಂದೆ ಈ ರೀತಿ ನಾವು ಮಾಡಲ್ಲ. ಯಾರು ರೀತಿ ನೀವು ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago