ಕುಂದಾಪುರ: ಪ್ಲಾಸ್ಟಿಕ್ ಮಹಾಮಾರಿ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶಿಷ್ಟ ಪ್ರಯತ್ನವೊಂದನ್ನು ಮಾಡಲಾಗಿದೆ. ವಂದೇ ಮಾತರಂ ಹಾಡನ್ನು ಬಳಸಿಕೊಂಡು ವೀಡಿಯೊ ಸಾಂಗ್ ತಯಾರಿಸಿದ್ದು ಮನಮಟ್ಟುವಂತೆ ಮೂಡಿಬಂದಿದೆ. ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಟೀಮ್ ಹಾಗೂ ಲೈಫ್ಲೈಕ್ ಪ್ರೊಡಕ್ಷನ್ ಸಹಯೋಗದಲ್ಲಿ ಎರಡೂವರೆ ನಿಮಿಷಗಳ ಈ ವೀಡಿಯೋ ತಯಾರಿಸಲಾಗಿದೆ.
ಭೂದೇವಿ ಪ್ಲಾಸ್ಟಿಕ್ ಸುಳಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿರುವ ಕಥಾ ಹಂದರವನ್ನು ಇಟ್ಟುಕೊಂಡು ಹಾಡನ್ನು ಚಿತ್ರಕರಿಸಲಾಗಿದ್ದು, ಇದಕ್ಕೆ ವಂದೇ ಮಾತರಂ ಹಾಡನ್ನು ಬಳಸಿಕೊಳ್ಳಲಾಗಿದೆ. 3.4 ನಿಮಿಷ ಅವಧಿಯ ಈ ಹಾಡಿನಲ್ಲಿ ಭೂಮಿ ಕಾಯುವ ದೈವ ಮರೆಯಾದ ಭೂಮಿಯ ಸೌಂದರ್ಯವನ್ನು ಹುಡುಕುತ್ತಾ ಪ್ಲಾಸ್ಟಿಕ್ ಎಂಬ ರಕ್ಕಸನೊಂದಿಗೆ ಹೋರಾಡುವ ಸನ್ನಿವೇಶವನ್ನು ಅದ್ಭುತವಾಗಿ ಕಟ್ಟಿಕೊಡಲಾಗಿದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ನ ಡಾ. ರಶ್ಮಿ ಕುಂದಾಪುರ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಎಂಬ ಸಮಾನ ಮನಸ್ಕರ ತಂಡವೊಂದು ಕಳೆದ 33 ವಾರಗಳಿಂದ ಕುಂದಾಪುರ ಕಡಲ ಕಿನಾರೆಯ ಸ್ವಚ್ಛತೆಯನ್ನು ಮಾಡಿ, ಪ್ಲಾಸ್ಟಿಕ್ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದೆ. ಮೂರು ಜನರಿಂದ ಆರಂಭಗೊಂಡ ಈ ತಂಡದಲ್ಲಿ ಈಗ 33 ಮಂದಿ ಇದ್ದಾರೆ. ಈಗಾಗಲೇ ಗೋಪಾಡಿ, ಕೋಡಿ, ಕುಂಬಾಡಿ, ಕೋಟೇಶ್ವರ, ಮಾಬುಕಲ ಹೀಗೆ ಕಡಲ ಕಿನಾರೆಯಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ಲಾಸ್ಟಿಕ್ ಜನಜಾಗೃತಿಯನ್ನು ದೊಡ್ಡಮಟ್ಟದಲ್ಲಿ ಜನರಿಗೆ ತಲುಪಿಸುವ ಉದ್ದೇಶದಿಂದ ಈ ವಿಡಿಯೋ ಹಾಡನ್ನು ತಯಾರಿಸಲಾಗಿದೆ ಎಂದರು.
ಮೂರು ದಿನಗಳ ಹಿಂದೆ ಈ ಹಾಡನ್ನು ಯೂಟ್ಯೂಬ್ಗೆ ಅಪ್ಲೋಡ್ ಮಾಡಲಾಗಿದ್ದು, ಈವರೆಗೆ 16 ಸಾವಿರ ಮಂದಿ ವಿಡಿಯೋವನ್ನು ವೀಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಾಡಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಕಲಾವಿದರಾಗಿ ಶ್ರುತಿ ಜೈನ್ ರೆಂಜಾಳ, ಸತ್ಯನಾರಾಯಣ ಮಂಜ ಭಾಗವಹಿಸಿದ್ದಾರೆ ಎಂದು ತಿಳಿಸಿದರು.
ಸಂಗೀತ ದಿಗ್ಗಜ ಎ.ಆರ್. ರೆಹಮಾನ್ ಅವರ ಮೂಲ ವಂದೇ ಮಾತರಂ ಹಾಡನ್ನು ಬಳಕೆ ಮಾಡಿಕೊಂಡು ದೇಶಭಕ್ತಿಗೀತೆಗೆ ಪರ್ಯಾಯವಾಗಿ ಭೂಮಿ ಭಕ್ತಿಗೀತೆಯನ್ನಾಗಿ ರೂಪಿಸಲಾಗಿದೆ. ಅಕ್ಷತಾ ಹಾವಂಜೆ ಅವರ ಸುಮಧುರ ಕಂಠದಲ್ಲಿ ಮೂಡಿ ಬಂದಿರುವ ಸಂಗೀತಕ್ಕೆ ಡೇನಿಯಲ್ ಮತ್ತು ಸುಹಿತ್ ಸಾಹಿತ್ಯ ರಚಿಸಿದ್ದಾರೆ. ಯತೀಶ್ ರೈ ಸಿನಿಮಾಟೋಗ್ರಫಿ ಮಾಡಿದ್ದಾರೆ. ಕರಾವಳಿಯ ಸಂಸ್ಕೃತಿಯ ನೋಟದೊಂದಿಗೆ ಪ್ಲಾಸ್ಟಿಕ್ನಿಂದ ಭೂಮಿ ರಕ್ಷಿಸಬೇಕೆಂಬ ಸಂದೇಶ ಸಾರುವ ವೀಡಿಯೋ ಸಾಂಗ್ ಮನೋಜ್ಞವಾಗಿದೆ.
ಗೋಷ್ಠಿಯಲ್ಲಿ ಸಂಗೀತ ನಿರ್ದೇಶಕರಾದ ಡೆನಿಯಲ್ ಮತ್ತು ಸುಹೀತ್, ಅಕ್ಷತಾ ಹಾವಂಜೆ, ನಿರ್ಮಾಪಕ ಚಂದ್ರಕಾಂತ್ ಶೆಣೈ ಇದ್ದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…