ತಿರುಮಲ : ಪ್ಲಾಸ್ಟಿಕ್ ನಿಷೇಧದ ಕುರಿತಂತೆ ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನೊಂದು ವಾರದಲ್ಲಿ ದೇವಸ್ಥಾನದ ಎಲ್ಲಾ ಕಾರ್ಯಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಲು ಮುಂದಾಗಿದೆ.
ಹೌದು, ದೇಶದ ಅತಿ ದೊಡ್ಡ ಶ್ರೀಮಂತ ದೇವರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಿರುಪತಿ ತಿರುಮಲ ದೇವಸ್ಥಾನದ ಪರಿಸರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸಂಕಲ್ಪ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ ದೇವಸ್ಥಾನದ ಎಲ್ಲ ಕಾರ್ಯಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಲು ಮುಂದಾಗಿದೆ.
ಇನ್ನು ಎರಡನೇ ಹಂತದಲ್ಲಿ ತಿರುಮಲ ವಸತಿ ಗೃಹಗಳಲ್ಲಿ ತಂಗುವ ಭಕ್ತರಿಗೂ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲು ತಿರುಮಲ ದೇವಸ್ಥಾನ ಟ್ರಸ್ಟ್ ನಿರ್ಧರಿಸಿದೆ ಎನ್ನಲಾಗಿದೆ.
ಮೊದಲ ಹಂತವಾಗಿ ಇನ್ನೊಂದು ವಾರದಲ್ಲಿ ದೇವಸ್ಥಾನದ ಎಲ್ಲ ಕಾರ್ಯಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಲಾಗುತ್ತಿದ್ದು, ಎರಡನೇ ಹಂತದಲ್ಲಿ ಟಿಟಿಡಿಯ ವಸತಿ ಗೃಹಗಳಲ್ಲಿ ತಂಗುವ ಭಕ್ತರಿಗೂ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗುತ್ತದೆ. ಅಲ್ಲದೆ ತಿರುಮಲದ ಎಲ್ಲಾ ಹೋಟೆಲ್ ಗಳ ಮಾಲೀಕರ ಸಭೆ ಕರೆದು ಪ್ಲಾಸ್ಟಿಕ್ ಬಾಟಲಿ ಬಳಕೆ ನಿಲ್ಲಿಸುವಂತೆ ಮನವೊಲಿಸಲಾಗುತ್ತದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…