ಕೋಲ್ಕತ್ತ: ಪಶ್ಚಿಮ ಬಂಗಾಳದ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಜಯ ಗಳಿಸಿದೆ.
ಕೂಚ್ಬೆಹಾರ್ ಮತ್ತು ನಾದಿಯಾ ಜಿಲ್ಲೆಗಳ ದಿನ್ಹಟ, ಶಾಂತಿಪುರ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಅಭ್ಯರ್ಥಿಗಳು ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉತ್ತರ 24 ಪರಗಣ ಹಾಗೂ ದಕ್ಷಿಣ 24 ಪರಗಣ ಜಿಲ್ಲೆಗಳ ಖರ್ದಾಹ್ ಮತ್ತು ಗೊಸಬಾ ಕ್ಷೇತ್ರಗಳಲ್ಲಿ ಟಿಎಂಸಿ ಮತ್ತೆ ಜಯ ಗಳಿಸಿದೆ.
ಇದರೊಂದಿಗೆ, 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಟಿಎಂಸಿ ಸಂಖ್ಯಾಬಲ 215ಕ್ಕೆ ಹೆಚ್ಚಳವಾಗಿದೆ.
ಒಟ್ಟಾರೆ ಚಲಾವಣೆಯಾಗಿರುವ ಮತಗಳ ಪೈಕಿ ಟಿಎಂಸಿ ಶೇ 75.02 ಗಳಿಸಿದ್ದರೆ ಬಿಜೆಪಿಗೆ ಶೇ 14.48ರಷ್ಟು ಮಾತ್ರವೇ ದೊರೆತಿದೆ.
ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲ ನಾಲ್ವರು ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
‘ಈ ಗೆಲುವು ಜನರ ಗೆಲುವಾಗಿದೆ. ಪ್ರಚಾರ ಮತ್ತು ದ್ವೇಷದ ರಾಜಕೀಯಕ್ಕಿಂತ ಬಂಗಾಳವು ಯಾವಾಗಲೂ ಅಭಿವೃದ್ಧಿ, ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ಎಂಬುದನ್ನು ಈ ಗೆಲುವು ತೋರಿಸಿಕೊಟ್ಟಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಅಭಿವೃದ್ಧಿ ಪಥದಲ್ಲಿ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವುದಾಗಿ ನಾವು ಭರವಸೆ ನೀಡುತ್ತೇವೆ’ ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…