ಕೋಲ್ಕತ್ತ: ಪಶ್ಚಿಮ ಬಂಗಾಳದ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಜಯ ಗಳಿಸಿದೆ.
ಕೂಚ್ಬೆಹಾರ್ ಮತ್ತು ನಾದಿಯಾ ಜಿಲ್ಲೆಗಳ ದಿನ್ಹಟ, ಶಾಂತಿಪುರ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಅಭ್ಯರ್ಥಿಗಳು ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉತ್ತರ 24 ಪರಗಣ ಹಾಗೂ ದಕ್ಷಿಣ 24 ಪರಗಣ ಜಿಲ್ಲೆಗಳ ಖರ್ದಾಹ್ ಮತ್ತು ಗೊಸಬಾ ಕ್ಷೇತ್ರಗಳಲ್ಲಿ ಟಿಎಂಸಿ ಮತ್ತೆ ಜಯ ಗಳಿಸಿದೆ.
ಇದರೊಂದಿಗೆ, 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಟಿಎಂಸಿ ಸಂಖ್ಯಾಬಲ 215ಕ್ಕೆ ಹೆಚ್ಚಳವಾಗಿದೆ.
ಒಟ್ಟಾರೆ ಚಲಾವಣೆಯಾಗಿರುವ ಮತಗಳ ಪೈಕಿ ಟಿಎಂಸಿ ಶೇ 75.02 ಗಳಿಸಿದ್ದರೆ ಬಿಜೆಪಿಗೆ ಶೇ 14.48ರಷ್ಟು ಮಾತ್ರವೇ ದೊರೆತಿದೆ.
ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲ ನಾಲ್ವರು ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
‘ಈ ಗೆಲುವು ಜನರ ಗೆಲುವಾಗಿದೆ. ಪ್ರಚಾರ ಮತ್ತು ದ್ವೇಷದ ರಾಜಕೀಯಕ್ಕಿಂತ ಬಂಗಾಳವು ಯಾವಾಗಲೂ ಅಭಿವೃದ್ಧಿ, ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ಎಂಬುದನ್ನು ಈ ಗೆಲುವು ತೋರಿಸಿಕೊಟ್ಟಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಅಭಿವೃದ್ಧಿ ಪಥದಲ್ಲಿ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವುದಾಗಿ ನಾವು ಭರವಸೆ ನೀಡುತ್ತೇವೆ’ ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…