ಬೆಂಗಳೂರು ; ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಮಹಾಘಟಬಂಧನ್ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂಬುದನ್ನು ಘೋಷಿಸಲಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಬಿಜೆಪಿಯೇತರ ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ಮಂಗಳವಾರ ದೆಹಲಿಯಲ್ಲಿ ನಡೆದ ವಿಪಕ್ಷಗಳ ಸಭೆ ಹಾಗೂ ಕೋಲ್ಕತಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆಗಿನ ಚರ್ಚೆ ಮುಗಿಸಿ ನಿನ್ನೆ ಸಂಜೆ ವೇಳೆಗೆ ದೇವೇಗೌಡ ಅವರನ್ನು ಭೇಟಿ ಮಾಡಲು ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಆಗಮಿಸಿದ್ದರು.
ಇನ್ನೂ ಮಹಾಘಟಬಂಧನ್ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿಯೇ? ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ದೇವೇಗೌಡ, “ಚುನಾವಣೆ ಫಲಿತಾಂಶದ ನಂತರ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂದು ನಿಶ್ಚಯಿಸಲಾಗುವುದು. ಈ ಕುರಿತು ನಮ್ಮ ಮುಂದಿನ ನಡೆ ಏನು? ಎಂಬುದರ ಕುರಿತು ಚರ್ಚೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…