Featured

ಫಿಲಂಫೇರ್ ಪ್ರಶಸ್ತಿ ಸೌತ್ 2019 : ಯಶ್‌ ನಟನೆಯ ‘ಕೆಜಿಎಫ್ ಚಾಪ್ಟರ್‌– 1’ ಕನ್ನಡದ ಅತ್ಯುತ್ತಮ ಚಿತ್ರ -Vishwanews24

ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್‌ ನಟನೆಯ ‘ಕೆಜಿಎಫ್ ಚಾಪ್ಟರ್‌– 1’ ಕನ್ನಡದ ಅತ್ಯುತ್ತಮ ಚಿತ್ರವಾಗಿ ಫಿಲಂಫೇರ್ ಪ್ರಶಸ್ತಿ ಬಾಚಿಕೊಂಡಿದೆ. ಈ ಚಿತ್ರದ ಅಭಿನಯಕ್ಕಾಗಿ ರಾಕಿಂಗ್ ಸ್ಟಾರ್ ಯಶ್‌ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದ್ದು, ‘ಟಗರು’ ಚಿತ್ರದ ನಾಯಕಿ ಮಾನ್ವಿತಾ ಹರೀಶ್‌ಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

ಅತ್ಯುತ್ತಮ ನಿರ್ದೇಶಕ ಸೇರಿ ನಾಲ್ಕು ಫಿಲಂಫೇರ್ ಪ್ರಶಸ್ತಿಗಳನ್ನು ‘ನಾತಿಚರಾಮಿ’ ಚಿತ್ರ ಬಾಚಿಕೊಂಡಿದೆ. ಈ ಚಿತ್ರದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ, ಶರಣ್ಯಾಗೆ ಅತ್ಯುತ್ತಮ ಪೋಷಕ ನಟಿ ಹಾಗೂ ಶ್ರುತಿ ಹರಿಹರನ್‌ಗೆ ಅತ್ಯುತ್ತಮ ಕ್ರಿಟಿಕ್ಸ್ ಅವಾರ್ಡ್, ಇದೇ ಚಿತ್ರಕ್ಕೆ ಹಾಡಿದ ಬಿಂದುಮಾಲಿನಿ ಅವರಿಗೆ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿ ಸಿಕ್ಕಿದೆ.

ಚೆನ್ನೈನಲ್ಲಿ ಶನಿವಾರ (ಡಿಸೆಂಬರ್ 21) ರಾತ್ರಿ ಅತ್ಯಂತ ವರ್ಣರಂಜಿತವಾಗಿ ನಡೆದ ‘66ನೇ ಯಮಹಾ ಫ್ಯಾಸಿನೋ ಫಿಲಂಫೇರ್ ಅವಾರ್ಡ್ಸ್ ಸೌತ್ 2019’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಅದ್ಧೂರಿ ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳದ ಹಲವು ಮಂದಿ ಚಿತ್ರತಾರೆಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತುಂಬಿದರು.

‘ಅಯೋಗ್ಯ’ ಸಿನಿಮಾದಲ್ಲಿನ ಅತ್ಯುತ್ತಮ ಅಭಿನಯಕ್ಕಾಗಿ ನೀನಾಸಂ ಸತೀಶ್ ಅವರಿಗೆ ‘ಅತ್ಯುತ್ತಮ ಕ್ರಿಟಿಕ್ಸ್ ಅವಾರ್ಡ್’ ಮತ್ತು ‘ಟಗರು’ ಚಿತ್ರದ ಧನಂಜಯ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ನೀಡಲಾಯಿತು.

‘ಸರ್ಕಾರಿ ಹಿರಿಯ ಪ್ರಾಥಮಿಕಪಾಠ ಶಾಲೆ ಕಾಸರಗೋಡು’ ಚಿತ್ರಕ್ಕೆ ಸಂಗೀತ ನೀಡಿದ ವಾಸುಕಿ ವೈಭವ್‌ಗೆ ಅತ್ಯುತ್ತಮ ಸಂಗೀತ ನಿರ್ದೇಶಕ, ಯುವ ಗಾಯಕ ಸಂಚಿತ್ ಹೆಗಡೆಗೆ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ ಹಾಗೂ ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶ್ ಮೂರ್ತಿ ಅವರಿಗೆ ಅತ್ಯುತ್ತಮ ಸಾಹಿತ್ಯ ರಚನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕನ್ನಡತಿ ರಶ್ಮಿಕಾ ಮಂದಣ್ಣ ತೆಲುಗಿನ (ಗೀತ ಗೋವಿಂದಂ) ಚಿತ್ರದಲ್ಲಿನ ನಟನೆಗಾಗಿ ವಿಮರ್ಶಕರ ಮೆಚ್ಚುಗೆ ಪಡೆದ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಾಸುಕಿ ವೈಭವ್ ಪರವಾಗಿ ಅವರ ತಾಯಿಯ ಪ್ರಶಸ್ತಿ ಸ್ವೀಕರಿಸಿದರೆ, ಯಶ್ ಪರವಾಗಿ ಯಾರೂ ಹಾಜರಾಗಿರಲಿಲ್ಲ. ‘ಕವಲುದಾರಿ’ ಖ್ಯಾತಿಯ ನಟ ರಿಷಿ, ನಟಿಯರಾದ ಮೇಘನಾ ಗಾಂವಕರ್‌, ಪಾರುಲ್ ಯಾದವ್, ರಾಶಿ ಪೊನ್ನಪ್ಪ ಸೇರಿ ಹಲವು ಕಲಾವಿದರು ಪ್ರಶಸ್ತಿ ಪ್ರದಾನ ಮಾಡಿದರು.

ಫಿಲಂಫೇರ್ ಪ್ರಶಸ್ತಿ ಸೌತ್ 2019– ಕನ್ನಡ ಸಿನಿಮಾಗಳ ಪಟ್ಟಿ

ಅತ್ಯುತ್ತಮ ಚಿತ್ರ: ಕೆಜಿಎಫ್ ಚಾಪ್ಟರ್‌– 1
ಅತ್ಯುತ್ತಮ ನಿರ್ದೇಶಕ: ಮಂಸೋರೆ (ನಾತಿಚರಾಮಿ)
ಅತ್ಯುತ್ತಮ ನಾಯಕ ನಟ: ಯಶ್ (ಕೆಜಿಎಫ್ ಚಾಪ್ಟರ್‌– 1 )
ವಿಮರ್ಶಕರ ಮೆಚ್ಚುಗೆಗೆ ಪಾತ್ರರಾದ ಅತ್ಯುತ್ತಮ ನಟ: ಸತೀಶ್ ನೀನಾಸಂ (ಅಯೋಗ್ಯ)

ಅತ್ಯುತ್ತಮ ನಾಯಕ ನಟಿ: ಮಾನ್ವಿತಾ ಹರೀಶ್‌ (ಟಗರು)
ವಿಮರ್ಶಕರ ಮೆಚ್ಚುಗೆಗೆ ಪಾತ್ರರಾದ ಅತ್ಯುತ್ತಮ ನಟಿ: ಶ್ರುತಿ ಹರಿಹರನ್ (ನಾತಿಚರಾಮಿ)
ಅತ್ಯುತ್ತಮ ಹಿನ್ನೆಲೆ ಗಾಯಕ: ಸಂಜಿತ್ ಹೆಗಡೆ (ಶಾಕುಂತಲೆ ಸಿಕ್ಕಳು- ನಡುವೆ ಅಂತರವಿರಲಿ)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಬಿಂದುಮಾಲಿನಿ (ಭಾವಲೋಕದ- ನಾತಿಚರಾಮಿ)

ಅತ್ಯುತ್ತಮ ಸಾಹಿತ್ಯ: ಡಾ.ಎಚ್.ಎಸ್.ವೆಂಕಟೇಶಮೂರ್ತಿ (ಸಕ್ಕರೆಯ ಪಾಕದಲ್ಲಿ – ಹಸಿರು ರಿಬ್ಬನ್)
ಅತ್ಯುತ್ತಮ ಮ್ಯೂಸಿಕ್ ಆಲ್ಬಂ: ವಾಸುಕಿ ವೈಭವ್ (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು)

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago