Featured

ಫಿಲಂಫೇರ್ ಪ್ರಶಸ್ತಿ ಸೌತ್ 2019 : ಯಶ್‌ ನಟನೆಯ ‘ಕೆಜಿಎಫ್ ಚಾಪ್ಟರ್‌– 1’ ಕನ್ನಡದ ಅತ್ಯುತ್ತಮ ಚಿತ್ರ -Vishwanews24

ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್‌ ನಟನೆಯ ‘ಕೆಜಿಎಫ್ ಚಾಪ್ಟರ್‌– 1’ ಕನ್ನಡದ ಅತ್ಯುತ್ತಮ ಚಿತ್ರವಾಗಿ ಫಿಲಂಫೇರ್ ಪ್ರಶಸ್ತಿ ಬಾಚಿಕೊಂಡಿದೆ. ಈ ಚಿತ್ರದ ಅಭಿನಯಕ್ಕಾಗಿ ರಾಕಿಂಗ್ ಸ್ಟಾರ್ ಯಶ್‌ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದ್ದು, ‘ಟಗರು’ ಚಿತ್ರದ ನಾಯಕಿ ಮಾನ್ವಿತಾ ಹರೀಶ್‌ಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

ಅತ್ಯುತ್ತಮ ನಿರ್ದೇಶಕ ಸೇರಿ ನಾಲ್ಕು ಫಿಲಂಫೇರ್ ಪ್ರಶಸ್ತಿಗಳನ್ನು ‘ನಾತಿಚರಾಮಿ’ ಚಿತ್ರ ಬಾಚಿಕೊಂಡಿದೆ. ಈ ಚಿತ್ರದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ, ಶರಣ್ಯಾಗೆ ಅತ್ಯುತ್ತಮ ಪೋಷಕ ನಟಿ ಹಾಗೂ ಶ್ರುತಿ ಹರಿಹರನ್‌ಗೆ ಅತ್ಯುತ್ತಮ ಕ್ರಿಟಿಕ್ಸ್ ಅವಾರ್ಡ್, ಇದೇ ಚಿತ್ರಕ್ಕೆ ಹಾಡಿದ ಬಿಂದುಮಾಲಿನಿ ಅವರಿಗೆ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿ ಸಿಕ್ಕಿದೆ.

ಚೆನ್ನೈನಲ್ಲಿ ಶನಿವಾರ (ಡಿಸೆಂಬರ್ 21) ರಾತ್ರಿ ಅತ್ಯಂತ ವರ್ಣರಂಜಿತವಾಗಿ ನಡೆದ ‘66ನೇ ಯಮಹಾ ಫ್ಯಾಸಿನೋ ಫಿಲಂಫೇರ್ ಅವಾರ್ಡ್ಸ್ ಸೌತ್ 2019’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಅದ್ಧೂರಿ ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳದ ಹಲವು ಮಂದಿ ಚಿತ್ರತಾರೆಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತುಂಬಿದರು.

‘ಅಯೋಗ್ಯ’ ಸಿನಿಮಾದಲ್ಲಿನ ಅತ್ಯುತ್ತಮ ಅಭಿನಯಕ್ಕಾಗಿ ನೀನಾಸಂ ಸತೀಶ್ ಅವರಿಗೆ ‘ಅತ್ಯುತ್ತಮ ಕ್ರಿಟಿಕ್ಸ್ ಅವಾರ್ಡ್’ ಮತ್ತು ‘ಟಗರು’ ಚಿತ್ರದ ಧನಂಜಯ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ನೀಡಲಾಯಿತು.

‘ಸರ್ಕಾರಿ ಹಿರಿಯ ಪ್ರಾಥಮಿಕಪಾಠ ಶಾಲೆ ಕಾಸರಗೋಡು’ ಚಿತ್ರಕ್ಕೆ ಸಂಗೀತ ನೀಡಿದ ವಾಸುಕಿ ವೈಭವ್‌ಗೆ ಅತ್ಯುತ್ತಮ ಸಂಗೀತ ನಿರ್ದೇಶಕ, ಯುವ ಗಾಯಕ ಸಂಚಿತ್ ಹೆಗಡೆಗೆ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ ಹಾಗೂ ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶ್ ಮೂರ್ತಿ ಅವರಿಗೆ ಅತ್ಯುತ್ತಮ ಸಾಹಿತ್ಯ ರಚನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕನ್ನಡತಿ ರಶ್ಮಿಕಾ ಮಂದಣ್ಣ ತೆಲುಗಿನ (ಗೀತ ಗೋವಿಂದಂ) ಚಿತ್ರದಲ್ಲಿನ ನಟನೆಗಾಗಿ ವಿಮರ್ಶಕರ ಮೆಚ್ಚುಗೆ ಪಡೆದ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಾಸುಕಿ ವೈಭವ್ ಪರವಾಗಿ ಅವರ ತಾಯಿಯ ಪ್ರಶಸ್ತಿ ಸ್ವೀಕರಿಸಿದರೆ, ಯಶ್ ಪರವಾಗಿ ಯಾರೂ ಹಾಜರಾಗಿರಲಿಲ್ಲ. ‘ಕವಲುದಾರಿ’ ಖ್ಯಾತಿಯ ನಟ ರಿಷಿ, ನಟಿಯರಾದ ಮೇಘನಾ ಗಾಂವಕರ್‌, ಪಾರುಲ್ ಯಾದವ್, ರಾಶಿ ಪೊನ್ನಪ್ಪ ಸೇರಿ ಹಲವು ಕಲಾವಿದರು ಪ್ರಶಸ್ತಿ ಪ್ರದಾನ ಮಾಡಿದರು.

ಫಿಲಂಫೇರ್ ಪ್ರಶಸ್ತಿ ಸೌತ್ 2019– ಕನ್ನಡ ಸಿನಿಮಾಗಳ ಪಟ್ಟಿ

ಅತ್ಯುತ್ತಮ ಚಿತ್ರ: ಕೆಜಿಎಫ್ ಚಾಪ್ಟರ್‌– 1
ಅತ್ಯುತ್ತಮ ನಿರ್ದೇಶಕ: ಮಂಸೋರೆ (ನಾತಿಚರಾಮಿ)
ಅತ್ಯುತ್ತಮ ನಾಯಕ ನಟ: ಯಶ್ (ಕೆಜಿಎಫ್ ಚಾಪ್ಟರ್‌– 1 )
ವಿಮರ್ಶಕರ ಮೆಚ್ಚುಗೆಗೆ ಪಾತ್ರರಾದ ಅತ್ಯುತ್ತಮ ನಟ: ಸತೀಶ್ ನೀನಾಸಂ (ಅಯೋಗ್ಯ)

ಅತ್ಯುತ್ತಮ ನಾಯಕ ನಟಿ: ಮಾನ್ವಿತಾ ಹರೀಶ್‌ (ಟಗರು)
ವಿಮರ್ಶಕರ ಮೆಚ್ಚುಗೆಗೆ ಪಾತ್ರರಾದ ಅತ್ಯುತ್ತಮ ನಟಿ: ಶ್ರುತಿ ಹರಿಹರನ್ (ನಾತಿಚರಾಮಿ)
ಅತ್ಯುತ್ತಮ ಹಿನ್ನೆಲೆ ಗಾಯಕ: ಸಂಜಿತ್ ಹೆಗಡೆ (ಶಾಕುಂತಲೆ ಸಿಕ್ಕಳು- ನಡುವೆ ಅಂತರವಿರಲಿ)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಬಿಂದುಮಾಲಿನಿ (ಭಾವಲೋಕದ- ನಾತಿಚರಾಮಿ)

ಅತ್ಯುತ್ತಮ ಸಾಹಿತ್ಯ: ಡಾ.ಎಚ್.ಎಸ್.ವೆಂಕಟೇಶಮೂರ್ತಿ (ಸಕ್ಕರೆಯ ಪಾಕದಲ್ಲಿ – ಹಸಿರು ರಿಬ್ಬನ್)
ಅತ್ಯುತ್ತಮ ಮ್ಯೂಸಿಕ್ ಆಲ್ಬಂ: ವಾಸುಕಿ ವೈಭವ್ (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು)

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago