Featured

ಫಿಲಂಫೇರ್ ಪ್ರಶಸ್ತಿ ಸೌತ್ 2019 : ಯಶ್‌ ನಟನೆಯ ‘ಕೆಜಿಎಫ್ ಚಾಪ್ಟರ್‌– 1’ ಕನ್ನಡದ ಅತ್ಯುತ್ತಮ ಚಿತ್ರ -Vishwanews24

ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್‌ ನಟನೆಯ ‘ಕೆಜಿಎಫ್ ಚಾಪ್ಟರ್‌– 1’ ಕನ್ನಡದ ಅತ್ಯುತ್ತಮ ಚಿತ್ರವಾಗಿ ಫಿಲಂಫೇರ್ ಪ್ರಶಸ್ತಿ ಬಾಚಿಕೊಂಡಿದೆ. ಈ ಚಿತ್ರದ ಅಭಿನಯಕ್ಕಾಗಿ ರಾಕಿಂಗ್ ಸ್ಟಾರ್ ಯಶ್‌ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದ್ದು, ‘ಟಗರು’ ಚಿತ್ರದ ನಾಯಕಿ ಮಾನ್ವಿತಾ ಹರೀಶ್‌ಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

ಅತ್ಯುತ್ತಮ ನಿರ್ದೇಶಕ ಸೇರಿ ನಾಲ್ಕು ಫಿಲಂಫೇರ್ ಪ್ರಶಸ್ತಿಗಳನ್ನು ‘ನಾತಿಚರಾಮಿ’ ಚಿತ್ರ ಬಾಚಿಕೊಂಡಿದೆ. ಈ ಚಿತ್ರದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ, ಶರಣ್ಯಾಗೆ ಅತ್ಯುತ್ತಮ ಪೋಷಕ ನಟಿ ಹಾಗೂ ಶ್ರುತಿ ಹರಿಹರನ್‌ಗೆ ಅತ್ಯುತ್ತಮ ಕ್ರಿಟಿಕ್ಸ್ ಅವಾರ್ಡ್, ಇದೇ ಚಿತ್ರಕ್ಕೆ ಹಾಡಿದ ಬಿಂದುಮಾಲಿನಿ ಅವರಿಗೆ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿ ಸಿಕ್ಕಿದೆ.

ಚೆನ್ನೈನಲ್ಲಿ ಶನಿವಾರ (ಡಿಸೆಂಬರ್ 21) ರಾತ್ರಿ ಅತ್ಯಂತ ವರ್ಣರಂಜಿತವಾಗಿ ನಡೆದ ‘66ನೇ ಯಮಹಾ ಫ್ಯಾಸಿನೋ ಫಿಲಂಫೇರ್ ಅವಾರ್ಡ್ಸ್ ಸೌತ್ 2019’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಅದ್ಧೂರಿ ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳದ ಹಲವು ಮಂದಿ ಚಿತ್ರತಾರೆಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತುಂಬಿದರು.

‘ಅಯೋಗ್ಯ’ ಸಿನಿಮಾದಲ್ಲಿನ ಅತ್ಯುತ್ತಮ ಅಭಿನಯಕ್ಕಾಗಿ ನೀನಾಸಂ ಸತೀಶ್ ಅವರಿಗೆ ‘ಅತ್ಯುತ್ತಮ ಕ್ರಿಟಿಕ್ಸ್ ಅವಾರ್ಡ್’ ಮತ್ತು ‘ಟಗರು’ ಚಿತ್ರದ ಧನಂಜಯ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ನೀಡಲಾಯಿತು.

‘ಸರ್ಕಾರಿ ಹಿರಿಯ ಪ್ರಾಥಮಿಕಪಾಠ ಶಾಲೆ ಕಾಸರಗೋಡು’ ಚಿತ್ರಕ್ಕೆ ಸಂಗೀತ ನೀಡಿದ ವಾಸುಕಿ ವೈಭವ್‌ಗೆ ಅತ್ಯುತ್ತಮ ಸಂಗೀತ ನಿರ್ದೇಶಕ, ಯುವ ಗಾಯಕ ಸಂಚಿತ್ ಹೆಗಡೆಗೆ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ ಹಾಗೂ ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶ್ ಮೂರ್ತಿ ಅವರಿಗೆ ಅತ್ಯುತ್ತಮ ಸಾಹಿತ್ಯ ರಚನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕನ್ನಡತಿ ರಶ್ಮಿಕಾ ಮಂದಣ್ಣ ತೆಲುಗಿನ (ಗೀತ ಗೋವಿಂದಂ) ಚಿತ್ರದಲ್ಲಿನ ನಟನೆಗಾಗಿ ವಿಮರ್ಶಕರ ಮೆಚ್ಚುಗೆ ಪಡೆದ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಾಸುಕಿ ವೈಭವ್ ಪರವಾಗಿ ಅವರ ತಾಯಿಯ ಪ್ರಶಸ್ತಿ ಸ್ವೀಕರಿಸಿದರೆ, ಯಶ್ ಪರವಾಗಿ ಯಾರೂ ಹಾಜರಾಗಿರಲಿಲ್ಲ. ‘ಕವಲುದಾರಿ’ ಖ್ಯಾತಿಯ ನಟ ರಿಷಿ, ನಟಿಯರಾದ ಮೇಘನಾ ಗಾಂವಕರ್‌, ಪಾರುಲ್ ಯಾದವ್, ರಾಶಿ ಪೊನ್ನಪ್ಪ ಸೇರಿ ಹಲವು ಕಲಾವಿದರು ಪ್ರಶಸ್ತಿ ಪ್ರದಾನ ಮಾಡಿದರು.

ಫಿಲಂಫೇರ್ ಪ್ರಶಸ್ತಿ ಸೌತ್ 2019– ಕನ್ನಡ ಸಿನಿಮಾಗಳ ಪಟ್ಟಿ

ಅತ್ಯುತ್ತಮ ಚಿತ್ರ: ಕೆಜಿಎಫ್ ಚಾಪ್ಟರ್‌– 1
ಅತ್ಯುತ್ತಮ ನಿರ್ದೇಶಕ: ಮಂಸೋರೆ (ನಾತಿಚರಾಮಿ)
ಅತ್ಯುತ್ತಮ ನಾಯಕ ನಟ: ಯಶ್ (ಕೆಜಿಎಫ್ ಚಾಪ್ಟರ್‌– 1 )
ವಿಮರ್ಶಕರ ಮೆಚ್ಚುಗೆಗೆ ಪಾತ್ರರಾದ ಅತ್ಯುತ್ತಮ ನಟ: ಸತೀಶ್ ನೀನಾಸಂ (ಅಯೋಗ್ಯ)

ಅತ್ಯುತ್ತಮ ನಾಯಕ ನಟಿ: ಮಾನ್ವಿತಾ ಹರೀಶ್‌ (ಟಗರು)
ವಿಮರ್ಶಕರ ಮೆಚ್ಚುಗೆಗೆ ಪಾತ್ರರಾದ ಅತ್ಯುತ್ತಮ ನಟಿ: ಶ್ರುತಿ ಹರಿಹರನ್ (ನಾತಿಚರಾಮಿ)
ಅತ್ಯುತ್ತಮ ಹಿನ್ನೆಲೆ ಗಾಯಕ: ಸಂಜಿತ್ ಹೆಗಡೆ (ಶಾಕುಂತಲೆ ಸಿಕ್ಕಳು- ನಡುವೆ ಅಂತರವಿರಲಿ)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಬಿಂದುಮಾಲಿನಿ (ಭಾವಲೋಕದ- ನಾತಿಚರಾಮಿ)

ಅತ್ಯುತ್ತಮ ಸಾಹಿತ್ಯ: ಡಾ.ಎಚ್.ಎಸ್.ವೆಂಕಟೇಶಮೂರ್ತಿ (ಸಕ್ಕರೆಯ ಪಾಕದಲ್ಲಿ – ಹಸಿರು ರಿಬ್ಬನ್)
ಅತ್ಯುತ್ತಮ ಮ್ಯೂಸಿಕ್ ಆಲ್ಬಂ: ವಾಸುಕಿ ವೈಭವ್ (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು)

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago