ಸುಬ್ರಹ್ಮಣ್ಯ: ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ ಅಲರ್ಟ್ ಮಾಡಲಾಗಿದ್ದು ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ ಅಲರ್ಟ್ ಮಾಡಲಾಗಿದ್ದು ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಪವಿತ್ರ ತೀರ್ಥ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ದೇವಸ್ಥಾನ ಆಡಳಿತ ಮಂಡಳಿಯಿಂದ ಸೂಚನೆ ನೀಡಲಾಗಿದೆ. ಕುಕ್ಕೆ ಜಾತ್ರೆಯ ಕಾರಣ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಮತ್ತು ಭಕ್ತಾಧಿಗಳು ಆಗಮಿಸುತಿದ್ದಾರೆ. ಪುಣ್ಯಸ್ನಾನ ನೆರವೇರಿಸಲು ಸಹಜವಾಗಿ ಕುಮಾರಧಾರಾ ನದಿಗೆ ಭಕ್ತರು ಇಳಿಯುತ್ತಾರೆ. ಪುತ್ತೂರು ಉಪ ಆಯುಕ್ತ ಜುಬಿನ್ ಮೊಹಪಾತ್ರ ಅವರಿಂದ ಸೂಚನೆ ಬಂದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಈ ಸೂಚನೆ ನೀಡಿದೆ. ಕರಾವಳಿಯಲ್ಲಿ ಕಳೆದ ಕೆಲದಿನಗಳಿಂದ ನೀರಿನಲ್ಲಿ ಅನೇಕ ಅನಾಹುತಗಳು ನಡೆದು ಅನೇಕ ಜೀವಹಾನಿಗಳಾಗಿದ್ದರಿಂದ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…