ಸುಬ್ರಹ್ಮಣ್ಯ: ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ ಅಲರ್ಟ್ ಮಾಡಲಾಗಿದ್ದು ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ ಅಲರ್ಟ್ ಮಾಡಲಾಗಿದ್ದು ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಪವಿತ್ರ ತೀರ್ಥ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ದೇವಸ್ಥಾನ ಆಡಳಿತ ಮಂಡಳಿಯಿಂದ ಸೂಚನೆ ನೀಡಲಾಗಿದೆ. ಕುಕ್ಕೆ ಜಾತ್ರೆಯ ಕಾರಣ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಮತ್ತು ಭಕ್ತಾಧಿಗಳು ಆಗಮಿಸುತಿದ್ದಾರೆ. ಪುಣ್ಯಸ್ನಾನ ನೆರವೇರಿಸಲು ಸಹಜವಾಗಿ ಕುಮಾರಧಾರಾ ನದಿಗೆ ಭಕ್ತರು ಇಳಿಯುತ್ತಾರೆ. ಪುತ್ತೂರು ಉಪ ಆಯುಕ್ತ ಜುಬಿನ್ ಮೊಹಪಾತ್ರ ಅವರಿಂದ ಸೂಚನೆ ಬಂದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಈ ಸೂಚನೆ ನೀಡಿದೆ. ಕರಾವಳಿಯಲ್ಲಿ ಕಳೆದ ಕೆಲದಿನಗಳಿಂದ ನೀರಿನಲ್ಲಿ ಅನೇಕ ಅನಾಹುತಗಳು ನಡೆದು ಅನೇಕ ಜೀವಹಾನಿಗಳಾಗಿದ್ದರಿಂದ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ.
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…
ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…
ನವೆಂಬರ್ ಮೊದಲ ವಾರದಲ್ಲಿ ಪೈಪ್ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್ಲೈನ್ ಮೂಲಕ…