Featured

ಫೆಡರೇಶನ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರದ ಮೀನುಗಾರಿಕೆ ಯೋಜನೆ ಪರಿಣಾಮಕಾರಿ ಅನುಷ್ಠನಕ್ಕೆ ಬದ್ಧ : ಯಶ್‌ಪಾಲ್ ಎ. ಸುವರ್ಣ -Vishwanews24

ಫೆಡರೇಶನ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರದ ಮೀನುಗಾರಿಕೆ ಯೋಜನೆ ಪರಿಣಾಮಕಾರಿ ಅನುಷ್ಠನಕ್ಕೆ ಬದ್ಧ : ಯಶ್‌ಪಾಲ್ ಎ. ಸುವರ್ಣ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ೨೦೨೧-೨೨ ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ ರಮಾ ಲಕ್ಷ್ಮಿ ನಾರಾಯಣ ಸಭಾಭವನದಲ್ಲಿ ಯಶ್‌ಪಾಲ್ ಎ. ಸುವರ್ಣರವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಸದಸ್ಯರನ್ನು ಸ್ವಾಗತಿಸಿ ಮಾತನಾಡಿದ ಯಶ್‌ಪಾಲ್ ಎ. ಸುವರ್ಣ, ಕರಾವಳಿ ಜಿಲ್ಲೆಯ ಮೀನುಗಾರರ ಸಮಸ್ಯೆ ಬೇಡಿಕೆಗಳಿಗೆ ಹಲವು ದಶಕಗಳಿಂದ ಸ್ಪಂದಿಸಿ ಮೀನುಗಾರಿಕೆ ಅಭಿವೃದ್ಧಿಗೆ ಕಾರ್ಯಪ್ರವೃತ್ತವಾಗಿದ್ದು, ಮುಂದಿನ ದಿನಗಳಲ್ಲಿ ಸರಕಾರ ಮತ್ತು ಮೀನುಗಾರರ ನಡುವಿನ ಕೊಂಡಿಯಾಗಿ ಕೇಂದ್ರ ಹಾಗೂ ರಾಜ್ಯ ಸರಕಾರದ ಮೀನುಗಾರಿಕೆ ಯೋಜನೆ ಪರಿಣಾಮಕಾರಿ ಅನುಷ್ಟಾನಕ್ಕೆ ಫೆಡರೇಷನ್ ಬದ್ಧವಾಗಿದೆ ಎಂದು ಹೇಳಿದರು.
ಫೆಡರೇಶನ್ ಮಹಾಸಭೆಗೆ ೫೩ “ಬಿ” ವರ್ಗದ ಸದಸ್ಯರು ಮತ್ತು ೮೧೪ “ಸಿ” ವರ್ಗದ ಸದಸ್ಯರು ಮತ್ತು ಸರಕಾರದ ಪ್ರತಿನಿಧಿಗಳು ಹಾಜರಿದ್ದರು.

ಫೆಡರೇಶನ್ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸದಸ್ಯರಿಗೆ ಆರೋಗ್ಯಕಾರ್ಡು ಸೌಲಭ್ಯ ಒದಗಿಸುವುದು, ಸದಸ್ಯ ಸಹಕಾರಿ ಸಂಘಗಳ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಗಾರ, ಮೀನುಗಾರಿಕೆ ಮತ್ತು ಮೀನಿನ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿಯನ್ನು ನೀಡುವಉದ್ದೇಶದಿಂದ “ಮತ್ಸ್ಯ ಮೇಳ” ಆಯೋಜನೆ, ಸದಸ್ಯರಿಗೆ ಫೆಡರೇಶನಿನ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ ಏರ್ಪಡಿಸುವುದು, ಹಂಗಾರಕಟ್ಟಾ ಕೇಂದ್ರಗಳಲ್ಲಿ ನೂತನವಾಗಿ ಬ್ಯಾಂಕಿoಗ್ ವಿಭಾಗಗಳನ್ನು ಆರಂಭಿಸಿದ್ದು ಕಾಪುವಿನಲ್ಲಿ ನೂತನ ಶಾಖೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಕೇಂದ್ರ ಸರಕಾರದ ಆತ್ಮನಿರ್ಭರ ಭಾರತದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದು ಮತ್ತು ಸದಸ್ಯ ಮೀನುಗಾರರಿಗೆ ಕಿಸಾನ್ ಕ್ರೆಡಿಟ್‌ಕಾರ್ಡು ಸೌಲಭ್ಯ ಒದಗಿಸುವ ಬಗ್ಗೆ ಯೋಜನೆಗಳನ್ನು ರೂಪಿಸಲಾಗಿದ್ದು, ಕೆಲವೊಂದು ಆಯ್ದ ಕೇಂದ್ರಗಳಲ್ಲಿ ಫೆಡರೇಶನ್ ವತಿಯಿಂದ ಮತ್ಸ್ಯ ಕ್ಯಾಂಟೀನ್ ಆರಂಭಿಸಿ ಕಾರ್ಮಿಕ ಹಾಗೂ ವಿದ್ಯಾರ್ಥಿಗಳಿಗೆ ಮಿತದರದಲ್ಲಿ ಮೀನು ಊಟ ಒದಗಿಸುವ ಬಗ್ಗೆ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ.

ಫೆಡರೇಶನ್ ವತಿಯಿಂದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಕಾರದಿಂದ ಮಂಗಳೂರು ನಗರದ ಕೇಂದ್ರ ಭಾಗವಾದ ಊರ್ವ ಸ್ಟೋರ್ ನಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಸುಸಜ್ಜಿತ “ಮತ್ಸö್ಯ ಸಂಪದ” ನೂತನ ಪ್ರಧಾನ ಕಚೇರಿ ಕಟ್ಟಡ ಹಾಗೂ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿದ್ದು, ಸಹಕಾರಿ ಸಂಸ್ಥೆಗಳಿಗೆ, ಮೀನುಗಾರ ಸಂಘಗಳಿಗೆ ಮತ್ತು ಎಲ್ಲಾ ವರ್ಗದ ಮೀನುಗಾರರಿಗೆ ಅನುಕೂಲವಾಗುವ ಉದ್ದೇಶದಿಂದ ಆಧುನೀಕೃತ ಮೀನುಗಾರಿಕೆ ಮತ್ತು ಮೀನಿನ ಉತ್ಪನ್ನಗಳ ಬಗ್ಗೆ ತಾಂತ್ರಿಕ ಮಾಹಿತಿಯನ್ನು ನೀಡುವ ಉದ್ದೇಶದಿಂದ ತರಬೇತಿ ಕೇಂದ್ರ ಹಾಗೂ ಸಮುದ್ರ ಮೀನುಗಾರಿಕೆಯ ಜೊತೆಗೆ ಒಳನಾಡಿನ ಸಿಹಿ ನೀರಿನ ಮೀನುಗಾರಿಕೆಯನ್ನು ಅಭಿವೃದ್ದಿ ಪಡಿಸುವ ಉದ್ದೇಶದಿಂದ ವೈಜ್ಞಾನಿಕ ರೀತಿಯಲ್ಲಿ ಒಳನಾಡಿನ ಮೀನು ಮರಿ ಉತ್ಪಾದನೆಯ ಬಗ್ಗೆ ಮತ್ತು ಮೀನು ಸಾಕಣಿಯ ಬಗ್ಗೆ ಅಧ್ಯಯನ ಮಾಡಿರುವ ಮತ್ತು ಪರಿಣಿತರ ಸಹಕಾರವನ್ನು ಪಡೆದು ಮೀನು ಮರಿ ಉತ್ಪಾದನೆ ಮತ್ತು ಬಿತ್ತನೆಯ ಬಗ್ಗೆ ಹೊಸ ಯೋಜನೆಯನ್ನು ರೂಪಿಸಲಾಗಿದೆ.

ಮಹಾಸಭೆಯಲ್ಲಿ ಸಹಕಾರ ಸಂಘಗಳ ಜಂಟಿ ನಿರ್ದೇಶಕರಾಗಿ ಪದೋನ್ನತಿಗೊಂಡ ಪ್ರವೀಣ್ ಬಿ. ನಾಯಕ್ ಹಾಗೂ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮದ ವತಿಯಿಂದ ರಾಷ್ಟ್ರೀಯ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಘಗಳ ಸಾಧನಾ ಪ್ರಶಸ್ತಿ ಪುರಸ್ಕೃತ ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ರಾಮಚಂದ್ರ ಕುಂದರ್ ಹಾಗೂ ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಭಾಸ್ಕರ್ ನಾಯ್ಕ್ ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಫೆಡರೇಶನಿನ ೨೦೨೧-೨೨ ನೇ ವಾರ್ಷಿಕ ವರದಿಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಮಹಾಸಭೆಯಲ್ಲಿ ಮಂಡಿಸಿದರು. ಸಂಸ್ಥೆಯ ಅಭಿವೃದ್ಧಿಯ ಚಟುವಟಿಕೆಗಳ ಬಗ್ಗೆ ಹಾಗೂ ನಿರಂತರ ಲಾಭದಾಯಕವಾಗಿ ಮುನ್ನಡೆಸುತ್ತಿರುವ ಸಂಸ್ಥೆಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಮಹಾಸಭೆಯಲ್ಲಿ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದರು.
ಸಭೆಯಲ್ಲಿ ಉಪಾಧ್ಯಕ್ಷರಾದ ಪುರುಷೋತ್ತಮ ಅಮೀನ್, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಹರೀಶ್‌ಕುಮಾರ್ ಹಾಗೂ ಫೆಡರೇಶನಿನ ಆಡಳಿತ ಮಂಡಳಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

3 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

4 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

4 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

4 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

5 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

5 hours ago