ಫೆಬ್ರವರಿ 14ರಂದು ಪುಲ್ವಾಮಾ ಹುತಾತ್ಮ ದಿನವಾಗಿ ಆಚರಿಸಿ : ಬಜರಂಗದಳ ಕರೆ -Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಮಂಗಳೂರು : ಫೆಬ್ರವರಿ 14 ಹತ್ತಿರವಾಗುತ್ತಿದ್ದಂತೆ ಒಂದೆಡೆ ಯುವ ಮನಸ್ಸುಗಳಲ್ಲಿ ಪ್ರೀತಿಯ ಚಿಲುಮೆ ಪುಟಿದೇಳುತ್ತಿದೆ. ಆ ದಿನವನ್ನು ತುಂಬಾ ಸ್ಪೇಷಲ್ ಆಗಿ ಆಚರಿಸಬೇಕೆಂಬ ಮಹದಾಸೆ ಹೊತ್ತಿರುವ ಪ್ರೇಮಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಈ ದಿನವನ್ನು ವಿರೋಧಿಸುತ್ತಾ ಬಂಧಿರುವ ಹಿಂದೂಪರ ಸಂಘಟನೆಗಳು ಈ ಬಾರಿಯೂ ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು ಆಚರಿಸದಂತೆ ಕರೆ ನೀಡಿದೆ. ಇದಕ್ಕೆ ಕಾರಣವೂ ಕೂಡ ಇದೆ.

ಫೆಬ್ರವರಿ 14ರಂದು ದೇಶ ಇವರೆಗೆ ಕಂಡು ಕೇಳರಿಯದ ಭಯೋತ್ಪಾದಕ ದಾಳಿಗೆ ಒಳಗಾದ ದಿನ. 2019ರ ಫೆಬ್ರವರಿ 14 ರಂದು ಜಮ್ಮುವಿನ ಫುಲ್ವಾಮಾದಲ್ಲಿ ಸಿಆರ್ ಪಿಎಫ್ ತುಕಡಿಯನ್ನು ಗುರಿಯಾಗಿಸಿ ಜೈಶೆ ಮೊಹಮ್ಮದ್ ಉಗ್ರ ಸಂಘಟನೆ ಆತ್ಮಾಹುತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 44 ಸಿಆರ್ ಪಿಎಫ್ ಯೋಧರು ಹುತಾತ್ಮರಾದರೆ, 70 ಕ್ಕೂ ಹೆಚ್ಚು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.

ಈ ಹಿನ್ನಲೆಯಲ್ಲಿ ಫೆಬ್ರವರಿ 14 ರಂದು ಪ್ರೇಮಿಗಳ ದಿನ ಬದಲು ಪುಲ್ವಾಮಾ ಹುತಾತ್ಮರ ದಿನವನ್ನಾಗಿ ಆಚರಿಸಲು ಹಿಂದೂ ಸಂಘಟನೆಗಳು ಕರೆ ನೀಡಿವೆ. ಬಜರಂಗದಳ ಫೆಬ್ರವರಿ 14 ರಂದು ಪುಲ್ವಾಮಾ ಹುತಾತ್ಮ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದು, ಕೇಂದ್ರ ಸರಕಾರ ಫೆಬ್ರವರಿ 14 ನ್ನು ಪುಲ್ವಾಮಾ ಘಟನೆಯಲ್ಲಿ ವೀರ ಮರಣವನ್ನಪ್ಪಿದ ಯೋಧರ ಗೌರವಾರ್ಥ ಹುತಾತ್ಮ ದಿನವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿದೆ.