ಮಂಗಳೂರು : ಫೆಬ್ರವರಿ 14 ಹತ್ತಿರವಾಗುತ್ತಿದ್ದಂತೆ ಒಂದೆಡೆ ಯುವ ಮನಸ್ಸುಗಳಲ್ಲಿ ಪ್ರೀತಿಯ ಚಿಲುಮೆ ಪುಟಿದೇಳುತ್ತಿದೆ. ಆ ದಿನವನ್ನು ತುಂಬಾ ಸ್ಪೇಷಲ್ ಆಗಿ ಆಚರಿಸಬೇಕೆಂಬ ಮಹದಾಸೆ ಹೊತ್ತಿರುವ ಪ್ರೇಮಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಈ ದಿನವನ್ನು ವಿರೋಧಿಸುತ್ತಾ ಬಂಧಿರುವ ಹಿಂದೂಪರ ಸಂಘಟನೆಗಳು ಈ ಬಾರಿಯೂ ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು ಆಚರಿಸದಂತೆ ಕರೆ ನೀಡಿದೆ. ಇದಕ್ಕೆ ಕಾರಣವೂ ಕೂಡ ಇದೆ.
ಫೆಬ್ರವರಿ 14ರಂದು ದೇಶ ಇವರೆಗೆ ಕಂಡು ಕೇಳರಿಯದ ಭಯೋತ್ಪಾದಕ ದಾಳಿಗೆ ಒಳಗಾದ ದಿನ. 2019ರ ಫೆಬ್ರವರಿ 14 ರಂದು ಜಮ್ಮುವಿನ ಫುಲ್ವಾಮಾದಲ್ಲಿ ಸಿಆರ್ ಪಿಎಫ್ ತುಕಡಿಯನ್ನು ಗುರಿಯಾಗಿಸಿ ಜೈಶೆ ಮೊಹಮ್ಮದ್ ಉಗ್ರ ಸಂಘಟನೆ ಆತ್ಮಾಹುತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 44 ಸಿಆರ್ ಪಿಎಫ್ ಯೋಧರು ಹುತಾತ್ಮರಾದರೆ, 70 ಕ್ಕೂ ಹೆಚ್ಚು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.
ಈ ಹಿನ್ನಲೆಯಲ್ಲಿ ಫೆಬ್ರವರಿ 14 ರಂದು ಪ್ರೇಮಿಗಳ ದಿನ ಬದಲು ಪುಲ್ವಾಮಾ ಹುತಾತ್ಮರ ದಿನವನ್ನಾಗಿ ಆಚರಿಸಲು ಹಿಂದೂ ಸಂಘಟನೆಗಳು ಕರೆ ನೀಡಿವೆ. ಬಜರಂಗದಳ ಫೆಬ್ರವರಿ 14 ರಂದು ಪುಲ್ವಾಮಾ ಹುತಾತ್ಮ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದು, ಕೇಂದ್ರ ಸರಕಾರ ಫೆಬ್ರವರಿ 14 ನ್ನು ಪುಲ್ವಾಮಾ ಘಟನೆಯಲ್ಲಿ ವೀರ ಮರಣವನ್ನಪ್ಪಿದ ಯೋಧರ ಗೌರವಾರ್ಥ ಹುತಾತ್ಮ ದಿನವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿದೆ.
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…