ಮಂಗಳೂರು : ಫೆಬ್ರವರಿ 14 ಹತ್ತಿರವಾಗುತ್ತಿದ್ದಂತೆ ಒಂದೆಡೆ ಯುವ ಮನಸ್ಸುಗಳಲ್ಲಿ ಪ್ರೀತಿಯ ಚಿಲುಮೆ ಪುಟಿದೇಳುತ್ತಿದೆ. ಆ ದಿನವನ್ನು ತುಂಬಾ ಸ್ಪೇಷಲ್ ಆಗಿ ಆಚರಿಸಬೇಕೆಂಬ ಮಹದಾಸೆ ಹೊತ್ತಿರುವ ಪ್ರೇಮಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಈ ದಿನವನ್ನು ವಿರೋಧಿಸುತ್ತಾ ಬಂಧಿರುವ ಹಿಂದೂಪರ ಸಂಘಟನೆಗಳು ಈ ಬಾರಿಯೂ ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು ಆಚರಿಸದಂತೆ ಕರೆ ನೀಡಿದೆ. ಇದಕ್ಕೆ ಕಾರಣವೂ ಕೂಡ ಇದೆ.
ಫೆಬ್ರವರಿ 14ರಂದು ದೇಶ ಇವರೆಗೆ ಕಂಡು ಕೇಳರಿಯದ ಭಯೋತ್ಪಾದಕ ದಾಳಿಗೆ ಒಳಗಾದ ದಿನ. 2019ರ ಫೆಬ್ರವರಿ 14 ರಂದು ಜಮ್ಮುವಿನ ಫುಲ್ವಾಮಾದಲ್ಲಿ ಸಿಆರ್ ಪಿಎಫ್ ತುಕಡಿಯನ್ನು ಗುರಿಯಾಗಿಸಿ ಜೈಶೆ ಮೊಹಮ್ಮದ್ ಉಗ್ರ ಸಂಘಟನೆ ಆತ್ಮಾಹುತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 44 ಸಿಆರ್ ಪಿಎಫ್ ಯೋಧರು ಹುತಾತ್ಮರಾದರೆ, 70 ಕ್ಕೂ ಹೆಚ್ಚು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.
ಈ ಹಿನ್ನಲೆಯಲ್ಲಿ ಫೆಬ್ರವರಿ 14 ರಂದು ಪ್ರೇಮಿಗಳ ದಿನ ಬದಲು ಪುಲ್ವಾಮಾ ಹುತಾತ್ಮರ ದಿನವನ್ನಾಗಿ ಆಚರಿಸಲು ಹಿಂದೂ ಸಂಘಟನೆಗಳು ಕರೆ ನೀಡಿವೆ. ಬಜರಂಗದಳ ಫೆಬ್ರವರಿ 14 ರಂದು ಪುಲ್ವಾಮಾ ಹುತಾತ್ಮ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದು, ಕೇಂದ್ರ ಸರಕಾರ ಫೆಬ್ರವರಿ 14 ನ್ನು ಪುಲ್ವಾಮಾ ಘಟನೆಯಲ್ಲಿ ವೀರ ಮರಣವನ್ನಪ್ಪಿದ ಯೋಧರ ಗೌರವಾರ್ಥ ಹುತಾತ್ಮ ದಿನವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…