ನವದೆಹಲಿ: ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು.
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು. ನಾಲ್ಕು ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್ಪಿಎಫ್ ಅಧಿಕಾರಿಗಳ ಸಾವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾದಾಗ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು.
ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಮಾರ್ಧದಲ್ಲಿ ಜೀವವನ್ನು ಬಲಿಕೊಟ್ಟರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಗೆ ಅತ್ಯಂತ ಭೀಕರವಾಗಿ ದಾಳಿ ನಡೆಸಲಾಗಿತ್ತು. ಫೆಬ್ರವರಿ 14, 2019 ರಂದು ಮಧ್ಯಾಹ್ನ ಹೊತ್ತಿಗೆ ಈ ಭೀಕರ ದಾಳಿ ನಡೆದಿತ್ತು.
14 ಫೆಬ್ರವರಿ 2019
ಜಮ್ಮು ಮತ್ತು ಕಾಶ್ಮೀರದಲ್ಲಿ ನಲವತ್ತು ಸಿಆರ್ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಎರಡು ಬಸ್ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್ ಇ ಮೊಹಮ್ಮದ್ ಸಂಘಟನೆ ವಿಡಿಯೋವನ್ನು ಬಿಡುಗಡೆ ಮಾಡಿತು, ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದಾನೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…