ನವದೆಹಲಿ: ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು.
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು. ನಾಲ್ಕು ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್ಪಿಎಫ್ ಅಧಿಕಾರಿಗಳ ಸಾವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾದಾಗ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು.
ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಮಾರ್ಧದಲ್ಲಿ ಜೀವವನ್ನು ಬಲಿಕೊಟ್ಟರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಗೆ ಅತ್ಯಂತ ಭೀಕರವಾಗಿ ದಾಳಿ ನಡೆಸಲಾಗಿತ್ತು. ಫೆಬ್ರವರಿ 14, 2019 ರಂದು ಮಧ್ಯಾಹ್ನ ಹೊತ್ತಿಗೆ ಈ ಭೀಕರ ದಾಳಿ ನಡೆದಿತ್ತು.
14 ಫೆಬ್ರವರಿ 2019
ಜಮ್ಮು ಮತ್ತು ಕಾಶ್ಮೀರದಲ್ಲಿ ನಲವತ್ತು ಸಿಆರ್ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಎರಡು ಬಸ್ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್ ಇ ಮೊಹಮ್ಮದ್ ಸಂಘಟನೆ ವಿಡಿಯೋವನ್ನು ಬಿಡುಗಡೆ ಮಾಡಿತು, ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದಾನೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…