ಮಂಗಳೂರು: ಕರಾರಸಾ. ನಿಗಮವು ಮಂಗಳೂರಿನಿಂದ ಉಡುಪಿ-ಕುಂದಾಪುರ-ಭಟ್ಕಳ-ಅಂಕೋಲಾ-ಹುಬ್ಬಳ್ಳಿ-ಧಾರವಾಡ-ಬೆಳಗಾಂ-ನಿಪ್ಪಾಣಿ ಮಾರ್ಗವಾಗಿ ಪೂನಾಕ್ಕೆ ತೆರಳುತ್ತಿದ್ದ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮೇಲ್ದರ್ಜೆಗೇರಿಸಿ “ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿಅಕ್ಸ್ಲ್ ಎ.ಸಿ. ಸ್ಲೀಪರ್” ವಾಹನದೊಂದಿಗೆ ಫೆಬ್ರವರಿ 01 ರಿಂದ ಕಾರ್ಯಾಚರಣೆ ಮಾಡಲಾಗುವುದು.
ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಉಡುಪಿಗೆ 5.10ಕ್ಕೆ ತಲುಪಲಿದೆ., ಕುಂದಾಪುರದಿಂದ 6 ಗಂಟೆಗೆ ಹೊರಟು 7.30 ಕ್ಕೆ ಭಟ್ಕಳ ಮಾರ್ಗವಾಗಿ ಪೂನಾಕ್ಕೆ ಬೆಳಿಗ್ಗೆ 6.30ಕ್ಕೆ ತಲುಪಲಿದೆ. ಮರು ಪ್ರಯಾಣದಲ್ಲಿ ಪೂನಾದಿಂದ ಸಂಜೆ 6.30 ಗಂಟೆಗೆ ಹೊರಟು ಕುಂದಾಪುರಕ್ಕೆ ಬೆಳಗ್ಗೆ 6.30ಕ್ಕೆ, ಹಾಗೂ ಉಡುಪಿಗೆ ಬೆಳಗ್ಗೆ 7.10 ಕ್ಕೆ ತಲುಪಲಿದೆ. ನಂತರ ಮಂಗಳೂರಿಗೆ ಬೆಳಿಗ್ಗೆ 8.10 ಕ್ಕೆ ತಲುಪಲಿದೆ.
ಭಾರತದ ಬೃಹತ್ ಲಸಿಕೆ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24
ಸದರಿ ಸಾರಿಗೆಯಲ್ಲಿ ಮಂಗಳೂರಿನಿಂದ ಪೂನಾಕ್ಕೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣದರ ರೂ.1,340, ಉಡುಪಿಯಿಂದ ಪೂನಾಕ್ಕೆ ರೂ. 1,300 ಹಾಗೂ ಕುಂದಾಪುರದಿಂದ-ಪೂನಾಕ್ಕೆ ರೂ. 1,280 ನ್ನು ನಿಗಧಿ ಪಡಿಸಲಾಗಿದೆ.
ಸಾರಿಗೆಗೆ ಅವತಾರ್ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು, ಸಾರ್ವಜನಿಕರು ವೆಬ್ಸೈಟ್ www.ksrtc.in ಗೆ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಬಸ್ಸು ನಿಲ್ದಾಣ ದೂ. ಸಂಖ್ಯೆ: 7760990720, ಉಡುಪಿ ಬಸ್ಸು ನಿಲ್ದಾಣ ದೂ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ದೂ.ಸಂಖ್ಯೆ: 9663266009 ಸಂಪರ್ಕಿಸಬಹುದು. ಅಥವಾ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗವನ್ನು ಸಂಪರ್ಕಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನ ನೂತನ ಉಪ ಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…