Featured

ಫೆ. 01 ರಿಂದ ಮಂಗಳೂರು – ಪೂನಾ ನಡುವೆ ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಅಕ್ಸಿಲ್ ಎ.ಸಿ. ಸ್ಲೀಪರ್ ಸಾರಿಗೆ ಪ್ರಾರಂಭ -Vishwanews24

ಫೆ. 01 ರಿಂದ ಮಂಗಳೂರು – ಪೂನಾ ನಡುವೆ ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಅಕ್ಸಿಲ್ ಎ.ಸಿ. ಸ್ಲೀಪರ್ ಸಾರಿಗೆ ಪ್ರಾರಂಭ -Vishwanews24

ಮಂಗಳೂರು: ಕರಾರಸಾ. ನಿಗಮವು ಮಂಗಳೂರಿನಿಂದ ಉಡುಪಿ-ಕುಂದಾಪುರ-ಭಟ್ಕಳ-ಅಂಕೋಲಾ-ಹುಬ್ಬಳ್ಳಿ-ಧಾರವಾಡ-ಬೆಳಗಾಂ-ನಿಪ್ಪಾಣಿ ಮಾರ್ಗವಾಗಿ ಪೂನಾಕ್ಕೆ ತೆರಳುತ್ತಿದ್ದ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮೇಲ್ದರ್ಜೆಗೇರಿಸಿ “ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿಅಕ್ಸ್ಲ್ ಎ.ಸಿ. ಸ್ಲೀಪರ್” ವಾಹನದೊಂದಿಗೆ ಫೆಬ್ರವರಿ 01 ರಿಂದ ಕಾರ್ಯಾಚರಣೆ ಮಾಡಲಾಗುವುದು.

ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಉಡುಪಿಗೆ 5.10ಕ್ಕೆ ತಲುಪಲಿದೆ., ಕುಂದಾಪುರದಿಂದ 6 ಗಂಟೆಗೆ ಹೊರಟು 7.30 ಕ್ಕೆ ಭಟ್ಕಳ ಮಾರ್ಗವಾಗಿ ಪೂನಾಕ್ಕೆ ಬೆಳಿಗ್ಗೆ 6.30ಕ್ಕೆ ತಲುಪಲಿದೆ. ಮರು ಪ್ರಯಾಣದಲ್ಲಿ ಪೂನಾದಿಂದ ಸಂಜೆ 6.30 ಗಂಟೆಗೆ ಹೊರಟು ಕುಂದಾಪುರಕ್ಕೆ ಬೆಳಗ್ಗೆ 6.30ಕ್ಕೆ, ಹಾಗೂ ಉಡುಪಿಗೆ ಬೆಳಗ್ಗೆ 7.10 ಕ್ಕೆ ತಲುಪಲಿದೆ. ನಂತರ ಮಂಗಳೂರಿಗೆ ಬೆಳಿಗ್ಗೆ 8.10 ಕ್ಕೆ ತಲುಪಲಿದೆ.

ಭಾರತದ ಬೃಹತ್ ಲಸಿಕೆ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24

ಸದರಿ ಸಾರಿಗೆಯಲ್ಲಿ ಮಂಗಳೂರಿನಿಂದ ಪೂನಾಕ್ಕೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣದರ ರೂ.1,340, ಉಡುಪಿಯಿಂದ ಪೂನಾಕ್ಕೆ ರೂ. 1,300 ಹಾಗೂ ಕುಂದಾಪುರದಿಂದ-ಪೂನಾಕ್ಕೆ ರೂ. 1,280 ನ್ನು ನಿಗಧಿ ಪಡಿಸಲಾಗಿದೆ.

ಸಾರಿಗೆಗೆ ಅವತಾರ್ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು, ಸಾರ್ವಜನಿಕರು ವೆಬ್ಸೈಟ್ www.ksrtc.in ಗೆ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಬಸ್ಸು ನಿಲ್ದಾಣ ದೂ. ಸಂಖ್ಯೆ: 7760990720, ಉಡುಪಿ ಬಸ್ಸು ನಿಲ್ದಾಣ ದೂ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ದೂ.ಸಂಖ್ಯೆ: 9663266009 ಸಂಪರ್ಕಿಸಬಹುದು. ಅಥವಾ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗವನ್ನು ಸಂಪರ್ಕಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ನೂತನ ಉಪ ಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago