ಉಡುಪಿ: ಈ ಬಾರಿಯ ಉಡುಪಿ ಜಿಲ್ಲಾ ರೈತ ಸಮ್ಮೇಳನವನ್ನು ಫೆ.11 ರಂದು ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶ್ರೀಮತಿ ಶಾಲಿನಿ ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಇದರ ಉಡುಪಿ ಜಿಲ್ಲಾಧ್ಯಕ್ಷರಾದ ನವೀನ್ ಚಂದ್ರ ಜೈನ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಸಮ್ಮೇಳನವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರವರು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಬಿ. ಎಮ್. ಕೋಕರೆ, ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ, ದಕ್ಷಿಣ ಕನ್ನಡ ಹಾಲು ಉತ್ಪಾದಕರಾದ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರೀತ ಶೆಟ್ಟಿ, ದಕ್ಷಿಣ ಕನ್ನಡದ ಮೊಗವೀರ ಮಹಾಜನ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಹಾಲಕ್ಷ್ಮೀ ದೇವಸ್ಥಾನದ ಅಧ್ಯಕ್ಷ ವಾಸುದೇವ ಸಾಲ್ಯಾನ್, ಹಾಪ್ ಕಾಮ್ಸ್ ಸೀತಾರಮ ಗಾಣಿಗ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಹಾಗೂ ಸಮ್ಮೇಳನದಲ್ಲಿ ಪೆರಂಪಳ್ಳಿ ಜೆ.ವಾಸುದೇವ ಭಟ್ ಅವರು ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಗೋಷ್ಠಿಗಳು ಹಾಗೂ ಸಮಾರೋಪದೊಂದಿಗೆ ಸಮ್ಮೇಳನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ, ಜಿಲ್ಲಾ ಪದಾಧಿಕಾರಿಗಳಾದ ಸೀತಾರಾಮ ಗಾಣಿಗ, ಆಸ್ತೀಕ ಶಾಸ್ತ್ರೀ, ದೀಪಕ್ ಪೈ, ಚಂದ್ರಹಾಸ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ಪ್ರಶಾಂತ್ ಕುಮಾರ್, ಅನಂತ ಪದ್ಮನಾಭ ಉಡುಪ, ಮಹಿಳಾ ಪ್ರಮುಖರಾದ ನಿರ್ಮಲ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…