ರಾಯಚೂರು (Vishwanews24): ರಾಜ್ಯದ ಬಜೆಟ್ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು, 16ನೇ ವಿಧಾನಸಭೆಯ 3ನೇ ಅಧಿವೇಶನದಲ್ಲಿ 12ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದು, 15ರವರೆಗೆ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಫೆ.16ಕ್ಕೆ ಬಜೆಟ್ ಮಂಡನೆಯಾಗಲಿದ್ದು, 23ರವರೆಗೆ ಅಧಿವೇಶನ ನಡೆಯಲಿದೆ. ಇದಕ್ಕೂ ಮೊದಲು ಎಲ್ಲ ಶಾಸಕರಿಗೆ ಬಜೆಟ್ ಬಗ್ಗೆ ಮಾಹಿತಿ ನೀಡಲು ಫೆ.9ರಂದು ಬೆಂಗಳೂರಿನ ಹೋಟೆಲ್ ಕ್ಯಾಪಿಟಲ್ನಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಅಧಿವೇಶನದಲ್ಲಿ ಎಲ್ಲ ಸದಸ್ಯರು ತಪ್ಪದೆ ಭಾಗವಹಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಒಟ್ಟು 10 ದಿನಗಳ ಕಾಲ ಬಜೆಟ್ ಅಧಿವೇಶನ ನಡೆಯಲಿದೆ. ಶಾಸಕರು ಸರಿಯಾದ ಸಮಯಕ್ಕೆ ಬರುವಂತೆ ಮಾಡಲು ಬೆಳಗ್ಗೆ 9 ಗಂಟೆಗೆ ಉಚಿತ ತಿಂಡಿ ವ್ಯವಸ್ಥೆ ಮಾಡುತ್ತಿದ್ದೇವೆ. ಒಂದೊಂದು ದಿನ ಒಂದೊಂದು ಹೋಟೆಲ್ನಿಂದ ತಿಂಡಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಖಾದರ್ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…