ನವದೆಹಲಿ: ಚೀನಾ, ಸಿಂಗಾಪುರ, ಕೊರಿಯಾ, ಥಾಯ್ಲೆಂಡ್ ಮತ್ತು ಜಪಾನ್ನಿಂದ ಆಗಮಿಸುವ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಕಡ್ಡಾಯ ಕೋವಿಡ್ ಪರೀಕ್ಷಾ ನಿಯಮವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಅಧಿಸೂಚನೆಯ ಪ್ರಕಾರ, ಫೆಬ್ರವರಿ 13 ರಿಂದ ಚೀನಾ, ಸಿಂಗಾಪುರ್, ಹಾಂಗ್ ಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್’ ದೇಶಗಳಿಂದ ಭಾರತಕ್ಕೆ ಆಗಮಿಸುವವರು ಕಡ್ಡಾಯ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
‘ಸಚಿವಾಲಯವು ತನ್ನ ‘ಅಂತರರಾಷ್ಟ್ರೀಯ ಆಗಮನಕ್ಕಾಗಿ ಮಾರ್ಗಸೂಚಿಗಳನ್ನು’ ನವೀಕರಿಸುತ್ತಿದೆ ಮತ್ತು ನಿರ್ಗಮನ ಪೂರ್ವ COVID-19 ಪರೀಕ್ಷೆಯ ಅವಶ್ಯಕತೆಗಳನ್ನು ಕೈಬಿಡುತ್ತಿದೆ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ‘ಏರ್ ಸುವಿಧಾ’ ಪೋರ್ಟಲ್ನಲ್ಲಿ ಸ್ವಯಂ-ಆರೋಗ್ಯ ಘೋಷಣೆಯನ್ನು ಅಪ್ಲೋಡ್ ಮಾಡಲಾಗಿದೆ.
ಕೆಲ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷಾ ನಿಯಮದಿಂದ ವಿನಾಯಿತಿ ನೀಡಲಾಗಿದೆ ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಚೀನಾ, ಸಿಂಗಾಪುರ, ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್ನಿಂದ ಆಗಮಿಸುವ ಪ್ರಯಾಣಿಕರು ‘ಏರ್ ಸುವಿಧಾ’ ಪೋರ್ಟಲ್ನಲ್ಲಿ ಆರ್ಟಿ-ಪಿಸಿಆರ್ ವರದಿಯನ್ನು ಅಪ್ಲೋಡ್ ಮಾಡಲು ಸರ್ಕಾರ ಈ ಹಿಂದೆ ಕಡ್ಡಾಯಗೊಳಿಸಿತ್ತು. ಇದೀಗ ಹಿಂಪಡೆಯಲಾಗಿದೆ. ಹಾಗಾಗಿ ಇನ್ಮುಂದೆ ಈ ಐದು ದೇಶಗಳ ವಿದೇಶಿಗರು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…