ನವದೆಹಲಿ: ಚೀನಾ, ಸಿಂಗಾಪುರ, ಕೊರಿಯಾ, ಥಾಯ್ಲೆಂಡ್ ಮತ್ತು ಜಪಾನ್ನಿಂದ ಆಗಮಿಸುವ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಕಡ್ಡಾಯ ಕೋವಿಡ್ ಪರೀಕ್ಷಾ ನಿಯಮವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಅಧಿಸೂಚನೆಯ ಪ್ರಕಾರ, ಫೆಬ್ರವರಿ 13 ರಿಂದ ಚೀನಾ, ಸಿಂಗಾಪುರ್, ಹಾಂಗ್ ಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್’ ದೇಶಗಳಿಂದ ಭಾರತಕ್ಕೆ ಆಗಮಿಸುವವರು ಕಡ್ಡಾಯ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
‘ಸಚಿವಾಲಯವು ತನ್ನ ‘ಅಂತರರಾಷ್ಟ್ರೀಯ ಆಗಮನಕ್ಕಾಗಿ ಮಾರ್ಗಸೂಚಿಗಳನ್ನು’ ನವೀಕರಿಸುತ್ತಿದೆ ಮತ್ತು ನಿರ್ಗಮನ ಪೂರ್ವ COVID-19 ಪರೀಕ್ಷೆಯ ಅವಶ್ಯಕತೆಗಳನ್ನು ಕೈಬಿಡುತ್ತಿದೆ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ‘ಏರ್ ಸುವಿಧಾ’ ಪೋರ್ಟಲ್ನಲ್ಲಿ ಸ್ವಯಂ-ಆರೋಗ್ಯ ಘೋಷಣೆಯನ್ನು ಅಪ್ಲೋಡ್ ಮಾಡಲಾಗಿದೆ.
ಕೆಲ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷಾ ನಿಯಮದಿಂದ ವಿನಾಯಿತಿ ನೀಡಲಾಗಿದೆ ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಚೀನಾ, ಸಿಂಗಾಪುರ, ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್ನಿಂದ ಆಗಮಿಸುವ ಪ್ರಯಾಣಿಕರು ‘ಏರ್ ಸುವಿಧಾ’ ಪೋರ್ಟಲ್ನಲ್ಲಿ ಆರ್ಟಿ-ಪಿಸಿಆರ್ ವರದಿಯನ್ನು ಅಪ್ಲೋಡ್ ಮಾಡಲು ಸರ್ಕಾರ ಈ ಹಿಂದೆ ಕಡ್ಡಾಯಗೊಳಿಸಿತ್ತು. ಇದೀಗ ಹಿಂಪಡೆಯಲಾಗಿದೆ. ಹಾಗಾಗಿ ಇನ್ಮುಂದೆ ಈ ಐದು ದೇಶಗಳ ವಿದೇಶಿಗರು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…