ನವದೆಹಲಿ: ಚೀನಾ, ಸಿಂಗಾಪುರ, ಕೊರಿಯಾ, ಥಾಯ್ಲೆಂಡ್ ಮತ್ತು ಜಪಾನ್ನಿಂದ ಆಗಮಿಸುವ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಕಡ್ಡಾಯ ಕೋವಿಡ್ ಪರೀಕ್ಷಾ ನಿಯಮವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಅಧಿಸೂಚನೆಯ ಪ್ರಕಾರ, ಫೆಬ್ರವರಿ 13 ರಿಂದ ಚೀನಾ, ಸಿಂಗಾಪುರ್, ಹಾಂಗ್ ಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್’ ದೇಶಗಳಿಂದ ಭಾರತಕ್ಕೆ ಆಗಮಿಸುವವರು ಕಡ್ಡಾಯ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
‘ಸಚಿವಾಲಯವು ತನ್ನ ‘ಅಂತರರಾಷ್ಟ್ರೀಯ ಆಗಮನಕ್ಕಾಗಿ ಮಾರ್ಗಸೂಚಿಗಳನ್ನು’ ನವೀಕರಿಸುತ್ತಿದೆ ಮತ್ತು ನಿರ್ಗಮನ ಪೂರ್ವ COVID-19 ಪರೀಕ್ಷೆಯ ಅವಶ್ಯಕತೆಗಳನ್ನು ಕೈಬಿಡುತ್ತಿದೆ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ‘ಏರ್ ಸುವಿಧಾ’ ಪೋರ್ಟಲ್ನಲ್ಲಿ ಸ್ವಯಂ-ಆರೋಗ್ಯ ಘೋಷಣೆಯನ್ನು ಅಪ್ಲೋಡ್ ಮಾಡಲಾಗಿದೆ.
ಕೆಲ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷಾ ನಿಯಮದಿಂದ ವಿನಾಯಿತಿ ನೀಡಲಾಗಿದೆ ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಚೀನಾ, ಸಿಂಗಾಪುರ, ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್ನಿಂದ ಆಗಮಿಸುವ ಪ್ರಯಾಣಿಕರು ‘ಏರ್ ಸುವಿಧಾ’ ಪೋರ್ಟಲ್ನಲ್ಲಿ ಆರ್ಟಿ-ಪಿಸಿಆರ್ ವರದಿಯನ್ನು ಅಪ್ಲೋಡ್ ಮಾಡಲು ಸರ್ಕಾರ ಈ ಹಿಂದೆ ಕಡ್ಡಾಯಗೊಳಿಸಿತ್ತು. ಇದೀಗ ಹಿಂಪಡೆಯಲಾಗಿದೆ. ಹಾಗಾಗಿ ಇನ್ಮುಂದೆ ಈ ಐದು ದೇಶಗಳ ವಿದೇಶಿಗರು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…