ಫೆ. 22 ರಿಂದ 27ರ ವರೆಗೆ ಹೆಜಮಾಡಿಯಿಂದ – ಶಿರೂರಿನ ವರೆಗೆ 108 ಕಿಮಿಗಳ ‘ಜನಧ್ವನಿ’ ಪಾದಯಾತ್ರೆ : ಅಶೋಕ್ ಕುಮಾರ್ ಕೊಡವೂರು -Vishwanews24

Featured, ಉಡುಪಿ

ಫೆ. 22 ರಿಂದ 27ರ ವರೆಗೆ ಹೆಜಮಾಡಿಯಿಂದ – ಶಿರೂರಿನ ವರೆಗೆ 108 ಕಿಮಿಗಳ ‘ಜನಧ್ವನಿ’ ಪಾದಯಾತ್ರೆ : ಅಶೋಕ್ ಕುಮಾರ್ ಕೊಡವೂರು -Vishwanews24

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಂದಿರುವ ರೈತ ವಿರೋಧಿ ನೀತಿಗಳಿಂದ ಎ.ಪಿ.ಎಂ.ಸಿ, ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದು, ವಿದ್ಯುತ್ ಕಾಯ್ದೆ ತಿದ್ದುಪಡಿ ಹಾಗೂ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಗಳ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಫೆಬ್ರವರಿ 22 ರಿಂದ 27ರ ವರೆಗೆ ಹೆಜಮಾಡಿಯಿಂದ – ಶಿರೂರಿನ ವರೆಗೆ 108 ಕಿಮಿಗಳ ‘ಜನಧ್ವನಿ’ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.

ಅವರು ಶುಕ್ರವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ಸರಕಾರದಸೆಸ್ ಹೇರಿಕೆಯಿಂದ ತೈಲ ಬೆಲೆ ಏರಿಕೆಗೊಂಡು ಸರಕು ಸಾಗಣೆ ವೆಚ್ಚ ಹೆಚ್ಚಳವಾಗಿ ದಿನ ಬಳಕೆ ವಸ್ತುಗಳ ಬೆಲೆಗಳು ಹಾಗೂ ಸಿಮೆಂಟ್ ಮತ್ತು ಸ್ಟೀಲ್ ಬೆಲೆಗಳು ನಿಯಂತ್ರಣವಿಲ್ಲದಂತೆ ಮುನ್ನುಗ್ಗುತ್ತಿದೆ. ಅಗತ್ಯ ವಸ್ತುಗಳ ಕಾಯ್ದೆಯಿಂದ ಕೆಲವು ವಸ್ತುಗಳನ್ನು ತೆಗೆದು ಹಾಕಲಾಗಿದೆ. ಇದರಲ್ಲಿ ಅಕ್ರಮ ದಾಸ್ತಾನಿನ ಮೇಲೆ ದಾಳಿ ಮಾಡಲು ಅವಕಾಶವಿಲ್ಲದಂತಾಗಿ ಕೃತಕ ಅಭಾವ ಸೃಷ್ಟಿಗೆ ಸರಕಾರವೇ ಪ್ರೇರಣೆ ನೀಡಿದಂತಾಗಿದೆ. ತೈಲ ಬೆಲೆಯನ್ನು ಜಿ ಎಸ್ ಟಿ ವ್ಯಾಪ್ತಿಗೆ ತರಬೇಕೆಂಬ ಬೇಡಿಕೆ ಕನಸಾಗಿ ಉಳಿದಿದೆ.

ಛತ್ರಪತಿ ಶಿವಾಜಿಯವರ 391ನೇ ಜಯಂತಿ : ಪ್ರಧಾನಿ ಸೇರಿ ಹಲವು ಪ್ರಮುಖ ನಾಯಕರಿಂದ ಶುಭಾಶಯ -Vishwanews24

ಕೇಂದ್ರ ಮಾಗೂ ರಾಜ್ಯ ಸರಕಾರಗಳ ಈ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಲು ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಪಾದಯಾತ್ರೆಯು ಹೆಜಮಾಡಿ ಟೋಲ್ ಗೇಟ್ ನಿಂದ ಪ್ರಾರಂಭಗೊಂಡು ಕಾಪು-ಕಟಪಾಡಿ-ಉಡುಪಿ-ಕಲ್ಯಾಣಪುರ-ಸಂತೆಕಟ್ಟೆ-ಬ್ರಹ್ಮಾವರ-ಕುಂದಾಪುರ- ಅರೆಹೊಳೆ-ಬೈಂದೂರಿನಲ್ಲಿ ಸಮಾಪನಗೊಳ್ಳಲಿರುವುದು.

ಹೆಜಮಾಡಿಯಿಂದ ಬೈಂದೂರು ಶಿರೂರಿನವರೆಗಿನ 108 ಕಿ.ಮೀ. ಪಾದಯಾತ್ರೆಯಲ್ಲಿ ಪಕ್ಷದ ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ. *ಜನಧ್ವನಿ” ಪಾದಯಾತ್ರೆಯು ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರ ಘನ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಭಾಗವಹಿಸುವಿಕೆಯೊಂದಿಗೆ ಸಮಾಪನಗೊಳ್ಳಲಿರುವುದು. ಈ ಪಾದಯಾತ್ರೆಯಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರುಗಳು ಹಾಗೂ ಜಿಲ್ಲಾ ಮುಖಂಡರುಗಳು ಭಾಗವಹಿಸಲಿರುವರು ಎಂದರು.

ಪುತ್ತೂರು: ಸಾಲ ವಸೂಲಿಗಾಗಿ ಮನೆ ಮುಟ್ಟುಗೋಲು ; ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಗೆ ಶರಣು -Vishwanews24

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಬ್ಲಾಕ್ ಅಧ್ಯಕ್ಷರುಗಳಾದ ಮಂಜುನಾಥ ಪೂಜಾರಿ, ನವೀನ್ ಚಂದ್ರ ಸುವರ್ಣ, ದಿನಕರ ಹೇರೂರು, ಶಂಕರ್ ಕುಂದರ್, ಸದಾಶಿವ ಸಾಲ್ಯಾನ್, ಸದಾಶಿವ ದೇವಾಡಿಗ, ಪದಾಧಿಕಾರಿಗಳಾದ ದೀಪಕ್ ಕೋಟ್ಯಾನ್, ಸೌರಭ್ ಬಲ್ಲಾಳ್, ಗೀತಾ ವಾಗ್ಳೆ, ಶಶಿಧರ ಶೆಟ್ಟಿ, ಇಸ್ಮಾಯಿಲ್, ರೋಶನಿ ಒಲಿವೇರಾ, ಹರೀಶ್ ಪಾಂಗಾಳ, ಹರೀಶ್ ಕಿಣಿ, ನರಸಿಂಹ ಮೂರ್ತಿ, ಕಿಶೋರ್ ಎರ್ಮಾಳ್, ಹಬೀಬ್ ಆಲಿ, ವೈ ಸುಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.