Featured

ಫೆ. 22 ರಿಂದ 6ರಿಂದ 8ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ : ಸುರೇಶ್ ಕುಮಾರ್ – Vishwanews24

ಫೆ. 22 ರಿಂದ 6ರಿಂದ 8ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ : ಸುರೇಶ್ ಕುಮಾರ್ – Vishwanews24

ಬೆಂಗಳೂರು: ಫೆಬ್ರವರಿ 22ರಿಂದ 6ರಿಂದ 8ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸುವುದಕ್ಕೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪೂರ್ಣ ಪ್ರಮಾಣದ ಶಾಲೆ ಆರಂಭಿಸುವ ವಿಚಾರವಾಗಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ ವಿಧಾನಸೌಧದಲ್ಲಿ ನಡೆದ ಬಳಿಕ ಮಾಧ್ಯಮಗಳಿಗೆ ಸಚಿವ ಸುರೇಶ್‌ ಕುಮಾರ್‌ ಅವರು ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡುತ್ತ, 9,10 ಹಾಗು ಪಿಯು ತರಗತಿಯ ಹಾಜರಾತಿ ಉತ್ತಮವಾಗಿತ್ತು, ನಾವು ವಿದ್ಯಾರ್ಥಿಗಳು ಕಡ್ಡಾಯವಾಗಿ ಬರಬೇಕು ಅಂಥ ಕೂಡ ಹೇಳಿರಲಿಲ್ಲ, ಈ ನಡುವಿನಲ್ಲೂ ಕೂಡ ವಿದ್ಯಾರ್ಥಿಗಳಿಂದ ಹಾಗೂ ಅವರ ಪೋಶಕರ ಕಡೆಯಿಂದ ಉತ್ತಮ ಸ್ಪಂದನೆ ಕಂಡು ಬಂದಿದೆ ಅಂತ ಹೇಳಿದರು. ವಿದ್ಯಾಗಮದ ಫಲಿತಾಂಶಗಳನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗುವುದು ಅಂತ ಇದೇ ವೇಳೆ ಅವರು ಹೇಳಿದರು.

ಬೆಂಗಳೂರು : ಟ್ರಾಫಿಕ್ ಸಿಗ್ನಲ್‍ ಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು : ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ -Vishwanews24

1 ರಿಂದ 8ನೇ ತರಗತಿಯ ಶಾಲೆಗಳನ್ನು ಆರಂಭಿಸಲು ಪೋಷಕರು ಸರ್ಕಾರವನ್ನು ಒತ್ತಾಯ ಮಾಡಿದ್ದರು, ಇದಲ್ಲದೇ 5 ಬಾರಿ ಆರೋಗ್ಯ ಇಲಾಖೆಯ ಅಧಿಕಾರಗಳ ಜೊತೆಗೆ ಹಾಗೂ ಟಾಸ್ಕ್‌ ಫೋರ್ಸ್‌ ಜೊತೆಗೆ ಸಭೆ ನಡೆಸಿ ಸಾಧಕ-ಭಾದಕಗಳ ಬಗ್ಗೆ ಚರ್ಚೆ ನಡೆಸಲಾಯಿತು. ಶಾಲೆ ಆರಂಭಿಸದ ಹಿನ್ನಲೆಯಲ್ಲಿ ಯಾವ ಪರಿಣಾಮವನ್ನು ಬೀರಲಿದೆ ಎನ್ನುವುದನ್ನು ತಿಳಿದುಕೊಳ್ಳುವ ಸಲುವಾಗಿ ಅಜೀಂ ಪ್ರೇಮ್‌ಜಿ ವಿವಿ ದೇಶದ ವಿವಿಧ ಕಡೆಗಳಲ್ಲಿ ಸರ್ವೆ ಕಾರ್ಯವನ್ನು ನಡೆಸಿದ್ದು, ಈ ವೇಳೆಯಲ್ಲಿ ಆಘಾತಕಾರಿಮಾಹಿತಿಯೊಂದು ಸಿಕ್ಕಿದ್ದು, ಶೇ 90 ಮಕ್ಕಳು ವಿದ್ಯಾಬ್ಯಾಸವನ್ನೇ ಮರೆತಿದ್ದಾರೆ ಅಂತ ಹೇಳಿದರು. ಇನ್ನೂ ಕೇರಳ ಭಾಗದಿಂದ ಬರುವ ಮಕ್ಕಳಿಗೆ ಶಿಕ್ಷಕರಿಗೆ ಕರೋನ ವರದಿ ಇರೋದು ಕಡ್ಡಾಯವಾಗಿದೆ ಅಂತ ಅವರು ಇದೇ ವೇಳೆ ಹೇಳಿದರು. ವರದಿಯಲ್ಲಿ ನೆಗೆಟಿವ್‌ ಇದ್ದರೆ ಮಾತ್ರ ಇವರಿಗೆ ತರಗತಿಗೆ ಬರಲು ಅವಕಾಶ ನೀಡಲಾಗಿವುದು. ಇನ್ನೂ ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸುವಂತೆ ಈಗಾಗಲೇ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ.

ಉಡುಪಿ : ಬೀದಿ ಬದಿ ವ್ಯಾಪಾರಕ್ಕೆ ನಿರ್ಬಂಧ -Vishwanews24

ಮಕ್ಕಳು ಶಾಲೆಗೆ ಬರೋದು ಕಡ್ಡಾಯವಲ್ಲ, ಕೊಠಡಿಗಳ ಲಭ್ಯತೆಯನ್ನು ಆಧಾರಿಸಿ ಮುಂದಿನ ದಿನಗಳಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳಲಾಗುವುದು, ಇದಲ್ಲದೇ ಎಲ್ಲಾ ಜಿಲ್ಲೆಗಳ ಹಾಸ್ಟೆಲ್‌ಗಳನ್ನು ತೆರೆಯುವುಕ್ಕೆ ಆದೇಶ ಮಾಡಲಾಗಿದ್ದು, ಇದರಿಂದ ಮಕ್ಕಳಿಗೆ ಸಹಾಯವಾಗಲಿದೆ. ಶಾಲೆ ಆರಂಭವಾಗುವುದಕ್ಕೂ ಮುನ್ನ ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆಗೆ ವಿಡಿಯೋ ಕಾನ್ಪೇರೆನ್ಸ್‌ ಮೂಲಕ ಮಾತನಾಡಲಾಗುವುದು ಇದಲ್ಲದೇ 1 ರಿಂದ 5 ನೇ ತರಗತಿಗಳನ್ನು ವಿದ್ಯಾಗಮನ ಮೂಲಕ ಶುರು ಮಾಡಲಾಗುವುದು ತದನಂತರ ಮುಂಬರುವ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಅಂತ ಹೇಳಿದರು.

ಉಡುಪಿ :ಯುವಸ್ಪಂದನ ಕಾರ್ಯಕ್ರಮ : ಜಿಲ್ಲೆಗೆ ಸಮಗ್ರ ಪ್ರಶಸ್ತಿ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

11 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago