Featured

ಫೆ. 26ರಂದು ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ -Vishwanews24

ಫೆ. 26ರಂದು ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ -Vishwanews24

ಬೆಂಗಳೂರು, : ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ, ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಇದೇ 26ರಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಕೆಲವು ದಿನಗಳಿಂದ ಶರತ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗುವ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಅವರು ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದು ಈಗ ಸೇರ್ಪಡೆ ದಿನ ನಿಗದಿಯಾಗಿದೆ. 26ರಂದು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶರತ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ಸೇರಿದ ಬಳಿಕ, ಮಾಚ್೯ ಮೊದಲ ವಾರದಲ್ಲಿ ಹೊಸಕೋಟೆಯಲ್ಲಿ ಕಾಂಗ್ರೆಸ್‌ ಪಕ್ಷದ ಬೃಹತ್ ಸಮಾವೇಶ ನಡೆಸಿ ತಮ್ಮ ಶಕ್ತಿ ಪ್ರದರ್ಶನಸಲು ಶರತ್ ತೀರ್ಮಾನಿಸಿದ್ದಾರೆ.

ಆಸ್ಟ್ರೇಲಿಯಾ ಲಿಬರಲ್‌‌‌‌‌‌ ಪಾರ್ಟಿಯಿಂದ ವಿಕ್ಟೋರಿಯಾ ರಾಜ್ಯ ಆಡಳಿತ ಮಂಡಳಿಗೆ ಉಡುಪಿಯ ಶಿಲ್ಪಾ ಹೆಗ್ಡೆ ಆಯ್ಕೆ -Vishwanews24

2018ರ ವಿಧಾನಸಭೆ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ.ಟಿ.ಬಿ ನಾಗರಾಜ್ ವಿರುದ್ದ ಸೋಲನುಭವಿಸಿದ್ದರು. ಎಂ.ಟಿ.ಬಿ ನಾಗರಾಜ್ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದರು. ಬಳಿಕ ಶಾಸಕ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಹೊಸಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಟಿ.ಬಿ ನಾಗರಾಜ್‌, ಬಿಜೆಪಿಯಿಂದ ಟಿಕೆಟ್‌ ಸಿಗದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ವಿರುದ್ಧ ಸೋಲು ಕಂಡಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿ ಬಿಜೆಪಿಯಿಂದ ಆಯ್ಕೆಯಾದ ಎಂ.ಟಿ.ಬಿ ನಾಗರಾಜ್, ಇದೀಗ ಮತ್ತೆ ಸಚಿವರಾಗಿದ್ದಾರೆ.

1 ನಿಮಿಷದಲ್ಲಿ ಹತ್ತು ಶ್ಲೋಕ : ಇಂಡಿಯಾಸ್‌‌ ವರ್ಲ್ಡ್‌ ರೆಕಾರ್ಡ್‌ಗೆ ಪಾತ್ರರಾದ 3ರ ಹರೆಯದ ಮಂಗಳೂರಿನ ಬಾಲಕಿ ಆದ್ರಿತಿ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

10 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

13 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

13 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

14 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

14 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

14 hours ago