ಬೆಂಗಳೂರು, : ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ, ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಇದೇ 26ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಕೆಲವು ದಿನಗಳಿಂದ ಶರತ್ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಅವರು ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದು ಈಗ ಸೇರ್ಪಡೆ ದಿನ ನಿಗದಿಯಾಗಿದೆ. 26ರಂದು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶರತ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ಸೇರಿದ ಬಳಿಕ, ಮಾಚ್೯ ಮೊದಲ ವಾರದಲ್ಲಿ ಹೊಸಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಸಿ ತಮ್ಮ ಶಕ್ತಿ ಪ್ರದರ್ಶನಸಲು ಶರತ್ ತೀರ್ಮಾನಿಸಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ.ಟಿ.ಬಿ ನಾಗರಾಜ್ ವಿರುದ್ದ ಸೋಲನುಭವಿಸಿದ್ದರು. ಎಂ.ಟಿ.ಬಿ ನಾಗರಾಜ್ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದರು. ಬಳಿಕ ಶಾಸಕ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಹೊಸಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಟಿ.ಬಿ ನಾಗರಾಜ್, ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ವಿರುದ್ಧ ಸೋಲು ಕಂಡಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿ ಬಿಜೆಪಿಯಿಂದ ಆಯ್ಕೆಯಾದ ಎಂ.ಟಿ.ಬಿ ನಾಗರಾಜ್, ಇದೀಗ ಮತ್ತೆ ಸಚಿವರಾಗಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]