ಪುತ್ತೂರು: ಪುನುರುತ್ಹಾನಗೊಂಡು ಕಳೆದ ವರ್ಷ ಜರುಗಿದ ಬ್ರಹ್ಮ ಕಲಶೋತ್ಸವದ ಸಂದರ್ಭ ಹೊಸ ಇತಿಹಾಸ ನಿರ್ಮಾಣಕ್ಕೆ ಕಾರಣವಾಗಿದ್ದ ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್’ನಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ಜಾತ್ರಾ ಮಹೋತ್ಸವ ಫೆ. 26ರಿಂದ ಮಾಚ್೯ 2ರವರೆಗೆ ನಡೆಯಲಿದೆ.
ವೈದಿಕ ಮತ್ತು ತೌಳವ ವಿಧಿ ವಿಧಾನಗಳ ಮೂಲಕ ನಡೆಯಲಿರುವ ಈ ಜಾತ್ರಾ ಮಹೋತ್ಸವದ ಕಾರ್ಯಗಳು ಸುಲಲಿತವಾಗಿ ನೆರವೇರಲು ಸಮಿತಿ ರಚಿಸಲಾಗಿದ್ದು, ಪರ್ಪುಂಜ ರಾಮ್ ಜಾಲ್ ಶ್ರೀ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೂರೇಲು ಸಂಜೀವ ಪೂಜಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ ಅವರ ಮಾರ್ಗದರ್ಶನ ಮತ್ತು ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜಯಂತ ನಡುಬೈಲ್ ಅವರ ಅಧ್ಯಕ್ಷತೆಯಲ್ಲಿ ಗೆಜ್ಜೆಗಿರಿಯಲ್ಲಿ ನಡೆದ ಸಭೆಯಲ್ಲಿ ಸಮಿತಿ ರಚಿಸಲಾಗಿದ್ದು, ಜಾತ್ರೋತ್ಸವ ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಯಿತು.
5 ದಿನಗಳ ಉತ್ಸವ ಧ್ವಜಾರೋಹಣದೊಂದಿಗೆ ಆರಂಭಗೊಳ್ಳಲಿದ್ದು, ಆದಿ ದೈವ ಧೂಮಾವತಿ, ಕುಪ್ಪೆ ಪಂಜುರ್ಲಿ, ಕಲ್ಲಾಲ್ದಾಯ, ಕೊರತಿ ನೇಮೋತ್ಸವ, ಮೂಲಸ್ಥಾನ ಗರಡಿ ನೇಮೋತ್ಸವ, ದೇಯಿ ಬೈದ್ಯೆತಿ ನೇಮೋತ್ಸವ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…