Featured

ಫೆ.27ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ : ವಿಮಾನ ನಿಲ್ದಾಣ ಲೋಕಾರ್ಪಣೆ – Vishwanews24

ಫೆ.27ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ : ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ : ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ 27ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪ್ರಧಾನಿ ಅವರು ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಅವರ ಭೇಟಿ ಸಂದರ್ಭದಲ್ಲಿ ಸೂಕ್ತ ಟ್ರಾಫಿಕ್ ವ್ಯವಸ್ಥೆ, ಬೆಂಗಾವಲು ವಾಹನಗಳು, ಸುರಕ್ಷತಾ ಕ್ರಮಗಳು, ವೇದಿಕೆ, ಗ್ರೀನ್ ರೂಂ, ಅತಿಥಿ ಗಣ್ಯರಿಗೆ ವಾಸ್ತವ್ಯ ಮತ್ತು ಆತಿಥ್ಯ ವ್ಯವಸ್ಥೆ, ಇಂಟರ್ನೆಟ್ ಸಂಪರ್ಕ, ಸಿಸಿಟಿವಿ ಅಳವಡಿಕೆ, ನಿರಂತರ ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿಯೊಂದು ಕಾರ್ಯದ ಮೇಲುಸ್ತುವಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದರು.

ಸ್ಥಳೀಯವಾಗಿ ಅಂಬ್ಯುಲೆನ್ಸ್, ಅಗ್ನಿಶಾಮಕ ದಳದ ವಾಹನ ವ್ಯವಸ್ಥೆಯನ್ನು ಮಾಡಬೇಕು. ಪೊಲೀಸ್ ಬ್ಯಾಂಡ್ ವತಿಯಿಂದ ರಾಷ್ಟçಗೀತೆ ನುಡಿಸಲಾಗುವುದು. ಆಹಾರದ ಸುರಕ್ಷತೆ, ಬೆಂಕಿ ಸುರಕ್ಷತೆ ಮತ್ತು ವಿದ್ಯುತ್ ಸುರಕ್ಷತೆಯನ್ನು ಸಂಬAಧಪಟ್ಟ ಇಲಾಖಾಧಿಕಾರಿಗಳು ಪ್ರಮಾಣೀಕರಿಸಬೇಕು. ಅತಿಥಿಗಳಿಗೆ ಸೂಕ್ತ ವಾಸ್ತವ್ಯಕ್ಕಾಗಿ ಎಲ್ಲಾ ಸರ್ಕಾರಿ ಅತಿಥಿ ಗೃಹಗಳು ಮತ್ತು ನಗರದ ಲಾಡ್ಜ್ಗಳನ್ನು ಕಾಯ್ದಿರಿಸಬೇಕು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ, ವೇದಿಕೆ ಹಾಗೂ ಮುಂಭಾಗದಲ್ಲಿ ಆಸನ ವ್ಯವಸ್ಥೆ, ಪ್ರವೇಶ ದ್ವಾರ, ಶೌಚಾಲಯಗಳು ಸೇರಿದಂತೆ ಪ್ರತಿಯೊಂದು ಅಂಶಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಅಧಿಕಾರಿಗಳು ತಮಗೆ ನೀಡಲಾಗುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಮುಖ್ಯಮಂತ್ರಿ ಅವರ ವಿಶೇಷಾಧಿಕಾರಿ ರಾಜಪ್ಪ, ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಪಿಡಬ್ಲುಡಿ ಚೀಫ್ ಇಂಜಿನಿಯರ್ ಕಾಂತರಾಜು, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

13 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

13 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

13 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

17 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

17 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

17 hours ago