ಕಾಪು : ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಸಾನಿಧ್ಯದಲ್ಲಿ ಫೆ. 28 ರಿಂದ ಮಾ.2 ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವ ನಡೆಯಲಿದೆ.
ಮೂರು ದಿನಗಳ ಕಾಲ ನಡೆಯುವ ಮಾತೃವೈಭವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಪ್ರತೀ ದಿನ ಮಧ್ಯಾಹ್ನ ಮತ್ತು ರಾತ್ರಿ ನಿರಂತರ ಅನ್ನಸಂತರ್ಪಣೆ ನಡೆಯಲಿದೆ. ಅದಕ್ಕೆ ಪೂರಕವಾಗಿ ಭಕ್ತಾಧಿಗಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಹೊರೆಕಾಣಿಕೆ ಸಂಗ್ರಹಿಸಲು ತೀರ್ಮಾನಿಸಿದೆ.
ಇದನ್ನೂ ಓದಿ : 👇
ಸಮಿತಿಯು ಕಾಪು ಮಾರಿಯಮ್ಮನ ಭಕ್ತಾಧಿಗಳು, ಕಾಪುವಿನ ಅಮ್ಮನ ಮಕ್ಕಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಸಂಗ್ರಹಿಸುವ ಹೊರೆಕಾಣಿಕೆಯನ್ನು ಫೆ. 26ರಂದು ಸಂಜೆ ಗಂಟೆ 4 ಗಂಟೆಗೆ ಕಾಪು ಉಳಿಯಾರಗೋಳಿ ದಂಡತೀರ್ಥ ಮಠದ ಬಳಿಯಿಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆಯ ಮೂಲಕವಾಗಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಮರ್ಪಿಸಲಾಗುವುದು ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಮಾತೃವೈಭವ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಹೊರೆಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : 👇
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…